ಆಗಸ್ಟ್ 11 ರಂದು ಡಿಜೆ ಹಳ್ಳಿಯಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆಯ ಮೇಲಿನ ದಾಳಿ ಹಾಗೂ ಗಲಭೆಗೆ ಸಂಬಂಧಪಟ್ಟಂತೆ ಎನ್ಐಎ ಪೋಲೀಸರು (ರಾಷ್ಟ್ರೀಯ ತನಿಖಾ ಸಂಸ್ಥೆ) ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹಾಗೂ ಶಾಸಕ ರಜ್ವಾನ್ ಅರ್ಷದ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಎನ್ಐಎ ಪೋಲೀಸರು ಶಾಸಕರಿಬ್ಬರಿಗೆ ‘ಗಲಭೆಯ ವೇಳೆ ಹೋಗಿದ್ದುದು ಏಕೆ? ನೀವು ಅಲ್ಲಿ ಹೋದ ತಕ್ಷಣ ಗಲಭೆ ನಿಂತಿತು ಹೇಗೆ?’ ಎಂಬಂತಹ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ. ಎನ್ ಐಎ ಪೋಲೀಸರು ವಿಚಾರಣೆ ಮುಗಿಸಿ ವಾಪಸ್ ಕಳಿಸಿದ್ದಾರೆ. ಅಗತ್ಯವಿದ್ದರಡ ಮತ್ತೆ ವಿಚಾರಣೆಗೆ ಕರೆಸುವುದಾಗಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆಗಸ್ಟ್ 11 ರಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಸಂಬಂಧಿಯೊಬ್ಬ ಪ್ರವಾದಿ ಮಹಮದ್ ಅವರ ಬಗೆಗೆ ಅವಹೇಳನಕಾರಿಯಾಗಿ ಫೇಸ್ಬುಕ್ನಲ್ಲಿ ಬರೆದುಕೊಂಡದ್ದರಿಂದ ರೊಚ್ಚಿಗೆದ್ದ ಮುಸ್ಲಿಂ ಸಮುದಾಯ ಡಿಜೆ ಹಳ್ಳಿಯಲ್ಲಿನ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆಯ ಮೇಲೆ ಹಾಗೂ ಆ ಪ್ರದೇಶದಲ್ಲಿ ದೊಡ್ಡ ಗಲಭೆಯನ್ನೇ ನಡೆಸಿತ್ತು. ಗಲಭೆಗೆ ಕಾಂಗ್ರೆಸ್ ಪಕ್ಷದ ಸದಸ್ಯರೇ ಕಾರಣ ಎಂದು ಇತರ ಪಕ್ಷಗಳು ಆರೋಪಿಸಿದ್ದವು.
ವಿಚಾರಣೆಯ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ರಿಜ್ವಾನ್ ‘ನಮ್ಮನ್ನು ವಿಚಾರಣೆಗೆ ಮಾತ್ರ ಕರೆದಿದ್ದರು. ನಾವು ಹೋಗಿ ವಿಚಾರಣೆಯನ್ನು ಎದುರಿಸಿ ಬಂದಿದ್ದೇವೆ. ಎನ್ಐಎ ಅಧಿಕಾರಿಗಳು ‘ಗಲಭೆಯ ಸ್ಥಳಕ್ಕೆ ಏಕೆ ಹೋಗಿದ್ದಿರಿ? ನೀವು ಅಲ್ಲಿ ಏನು ನಡೆಯಿತು?’ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರಗಳನ್ನು ನೀಡಿದ್ದೇವೆ’ ಎಂದರು.
ಎನ್ಐಎ ಅಧಿಕಾರಿಗಳು ಮಾಜಿ ಮೇಯರ್ ಸಂಪತ್ ರಾಜ್ ಅವರನ್ನೂ ವಿಚಾರಣೆಗೊಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment