Trending

ಡಿ.ಕೆ.ರವಿ ಫೋಟೋ ಬಳಸಿದರೆ ಬೆಂಕಿ ಹಚ್ತೀನಿ….. ರವಿ ತಾಯಿ ಕೆಂಡಾಮಂಡಲ..

ಆರ್.ಆರ್.ನಗರ ಉಪ ಚುನಾವಣೆಗೆ ಪ್ರಾಮಾಣಿಕ ಅಧಿಕಾರಿಯಾಗಿದ್ದ ದಿವಂಗತ ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುತ್ತಾರೆಂಬ ವದಂತಿ ರಾಜಕೀಯ ವಲಯದಲ್ಲಿ ಕೇಳಿ ಬಂದ ಹಿನ್ನೆಲೆಯಲ್ಲಿ ಡಿ ಕೆ ರವಿ ತಾಯಿ , ಕುಸುಮಾ ವಿರುದ್ದ ಕೆಂಡಾಮಂಡಲವಾಗಿದ್ದಾರೆ.

ಕಾಂಗ್ರೆಸ್ ನವರುಡಿ. ಕೆ. ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುತ್ತಿರುವ ವಿಷಯ ತಿಳಿದ ರವಿ ಕುಟುಂಬದವರಿಂದ ಭಾರಿ ವಿರೋಧ ವ್ಯಕ್ತವಾಗಿದೆ.

ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ ಎಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲಿನಲ್ಲಿ ಡಿ.ಕೆ ರವಿ ತಾಯಿ ಗೌರಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ನನ್ನ ಮಗನಿಗೆ ಬಂದ ದುಡ್ಡಲ್ಲಿ ಒಂದು ಬಿಡಿಗಾಸೂ ನಮ್ಮ ಕಷ್ಟಕ್ಕೆ ಕೊಡಲಿಲ್ಲ. ನನ್ನ ಮಗನ ಹೆಸರು ಹೇಳಿಕೊಂಡು ಯಾಕೆ ಚುನಾವಣೆಗೆ ನಿಂತುಕೊಳ್ಳಬೇಕು. ಡಿ.ಕೆ ರವಿ ಸತ್ತಾಗ ಮಣ್ಣಲ್ಲಿ ಬಿಸಾಕಿ ಹೋದವಳು ಇವತ್ತಿನವರೆಗೂ ಬಂದಿಲ್ಲ. ಹೀಗಾಗಿ ಡಿಕೆ ರವಿ ಹೆಂಡ್ತಿ ಅನ್ನುವ ಯೋಗ್ಯತೆಯನ್ನು 6 ವರ್ಷದಲ್ಲೇ ಕಳೆದುಕೊಂಡಳು ಎಂದು ಗೌರಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಬೆಂಕಿ ಹಚ್ಚುತ್ತೇವೆ

ಕುಸುಮಾ ಚುನಾವಣೆಗೆ ನಿಂತುಕೊಂಡರೂ ಪರವಾಗಿಲ್ಲ, ನನ್ನ ಮಗನ ಹೆಸರು, ಫೋಟೋ ಬಳಸಿಕೊಳ್ಳಬಾರದು. ಫೋಟೋ ಬಳಸಿಕೊಂಡರೆ ನಾನೇ ಹುಡುಗರನ್ನು ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ ಎಂದು ಡಿ.ಕೆ ರವಿ ತಾಯಿ ಗೌರಮ್ಮ ಎಚ್ಚರಿಕೆ ನೀಡಿದ್ದಾರೆ.

ನಾನು ಕಷ್ಟಪಟ್ಟು ಮಗನನ್ನು ಓದಿಸಿದ್ದೆ, ನನ್ನ ಮಗನ ದುಡ್ಡನ್ನೆಲ್ಲಾ ನುಂಗಿ ನೀರು ಕುಡಿದ್ಲು. ನನ್ನ ಕಣ್ಣೆದುರೇ ಅವ್ರ ಅಪ್ಪ ಅಮ್ಮನೂ ನನ್ನ ಹಾಗೇ ಯಾವಾಗ್ ಆಗ್ತಾರೆ ಎಂದು ಕಾಯ್ತಾ ಇದ್ದೀನಿ ಎಂದು ಕುಸುಮಾ ಹಾಗೂ ಆಕೆ ಪೋಷಕರ ವಿರುದ್ಧ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದರು.

Team Newsnap
Leave a Comment
Share
Published by
Team Newsnap

Recent Posts

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024