ರಾಸಲೀಲೆ ಸಿಡಿ ಪ್ರಕರಣ ಸೋಮವಾರ ಸದನದಲ್ಲಿ ರಂಪ ರಾಮಾಯಣ ಮಾಡಿತು.
ಸದನದಲ್ಲಿ ಈ ವಿಷಯವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್, ಮಂಚದಲ್ಲಿ ಮಂಚದ ಕೆಲಸ ಮಾಡಬೇಕೇ ಹೊರತು ರಾಜಕಾರಣ ಮಾಡಬಾರದು. ನಾವ್ಯಾರೂ ಅವರಿಗೆ ಜಿಪ್ ತೆಗೀರಿ, ಶರ್ಟ್ ಬಿಚ್ಚಿ ಅಂತ ಹೇಳಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.
ಹನಿ ಟ್ರ್ಯಾಪ್ ಅಂತೆ, ಹನಿ ತಿಂದವರು ಯಾರು? ಹನಿ ತಿಂದ್ರೆ ತಾನೇ ಟ್ರ್ಯಾಪ್ ಆಗೋದು ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯ ಮಾಡಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ಎಸ್.ಟಿ.ಸೋಮಶೇಖರ್, ಯಾರೂ ನಿರ್ಮಾಪಕರು, ಯಾರು ನಿರ್ದೇಶಕರು, ಯಾರು ಫೈನಾನ್ಸಿಯರ್, ಯಾವ ಲೋಕೇಶನ್ ಅನ್ನೋದು ಚರ್ಚೆ ಆಗ್ತಿದೆ ಎಂದರು.
ಸಿಡಿ ಮಾಡುವ ದರಿದ್ರ ಕೆಲಸ ಕಾಂಗ್ರೆಸ್ ನವರದ್ದು ಎಂದು ಸೋಮಶೇಖರ್ ಹೇಳುತ್ತಾರೆ ಎಂದ ಕೂಡಲೇ ನಾನು ಹಾಗೆ ಹೇಳಿಲ್ಲ, ಬೇಕಾದ್ರೆ ಒಂದು ಕಾಪಿ ಕಳಿಸ್ತೀನಿ ನೋಡಿಕೊಳ್ಳಿ, ಎಲ್ಲರಿಗೂ ಕಳಿಸ್ತೀನಿ ಎಂದ ಸೋಮಶೇಖರ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.
ಮಂಚದಲ್ಲಿ ರಾಜಕಾರಣ ಮಾಡೋದಲ್ಲ: ಪ್ರಹ್ಲಾದ್ ಜೋಷಿ ಸಿಎಂ ಮಾಡ್ತೀನಿ ಅಂತಾ ನಾವ್ಯಾರೂ ಹೇಳಿಲ್ಲ. ಸಿದ್ದರಾಮಯ್ಯ ಜೊತೆ ಎರಡು ಸಲ ಮಾತಾಡ್ತಾರಂತೆ. ಕನ್ನಡಿಗರ ಬಗ್ಗೆ ಮಾತಾಡ್ತಾರಂತೆ. ಮಂಚದಲ್ಲಿ ಮಂಚದ ಕೆಲಸ ಮಾಡಬೇಕು ಹೊರತು, ಮಂಚದಲ್ಲಿ ರಾಜಕಾರಣ ಮಾಡೋದಲ್ಲ ಎಂದು ಮಾಜಿ ಸಚಿವರ ಸಿಡಿ ಪ್ರಕರಣದ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ