ಸೆಲ್ಫಿ ತೆಗೆದುಕೊಳ್ಳಲು ಹೋದ ಅಭಿಮಾನಿಯ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗರಂ ಆದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧದ ಬಳಿ ನಡೆದಿದೆ.
137ನೇ ಕಾಂಗ್ರೆಸ್ ಸಂಸ್ಥಾಪನ ದಿನಾಚರಣೆ ಹಿನ್ನೆಲೆ ಧ್ವಜಾರೋಹಣ ಮಾಡಲು ಶಿವಪುರ ಸತ್ಯಾಗ್ರಹ ಸೌಧಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು.
ನಾಯಕನನ್ನು ನೋಡಲು ವೇಳೆ ಅಭಿಮಾನಿಯೊಬ್ಬ ಅಧ್ಯಕ್ಷ ಶಿವಕುಮಾರ್ ಹಿಂದಿನಿಂದ ಬಂದು ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಕೆಂಡಾಮಂಡಲವಾದ ಡಿಕೆಎಸ್ ಅಭಿಮಾನಿಯ ಮೊಬೈಲ್ ಕಿತ್ತುಕೊಂಡು ಕಾಮನ್ಸೆನ್ಸ್ ಇಲ್ವಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಡಿಕೆಎಸ್ ಅವರಿಗೆ ಹಾರ ಹಾಕಿ ಸ್ವಾಗತಿಸಲು ಆಗಮಿಸಿದ ಬೇರೆ ಕಾರ್ಯಕರ್ತರು ಅವರು ಸಿಡಿಮಿಡಿಗೊಂಡಿದ್ದನ್ನು ಕಂಡು ಹಾರ ಹಾಕಲು ಹಿಂದೇಟು ಹಾಕಿದ್ದಾರೆ.
ಸದ್ಯ ಡಿ.ಕೆ.ಶಿವಕುಮಾರ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು