ಕನ್ನಡ ಪರ ನಕಲಿ ಹೋರಾಟಗಾರರು ಮತ್ತು ರೋಲ್ ಕಾಲ್ ಹೋರಾಟ ಗಾರರಿಗೆ ಮುಖ್ಯಮಂತ್ರಿಗಳು ಹೆದರಬಾರದು. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕೆಲ ಕನ್ನಡ ಸಂಘಟನೆಯವರು ಡಿ. 5 ರಂದು ನೀಡಿರುವ ಬಂದ್ ಜಿಲ್ಲೆಯಲ್ಲಿ ಹೇಗೆ ನಡೆಯುತ್ತದೆ. ಹೇಗೆ ಅವರು ಬಂದ್ ಆಚರಿಸುತ್ತಾರೆ ನೋಡೋಣ ಎಂದು ಬಿಜೆಪಿ ಶಾಸಕ ಬಸನಗೌಡ ರಾ. ಪಾಟೀಲ .ಯತ್ನಾಳ ಸವಾಲು ಹಾಕಿದ್ದಾರೆ.
ಮರಾಠಾ ಭಾಷೆ, ಬೆಳಗಾವಿ ವಿಚಾರದಲ್ಲಿ ಶಿವಸೇನಾ, ಶರದ ಪವಾರ, ಆಯೋಗ್ಯ ಅಜೀತ ವವಾರ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂಹಾರಾಜರ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ವಾಟಾಳ್ ನಾಗರಾಜ ಮತ್ತು ಕನ್ನಡ ಪರ ಸಂಘಟನೆಗಳು ಹೇಗೆ ಬಂದ್ ಮಾಡುತ್ತಾರೋ ನೋಡೋಣ ಎಂದಿದ್ದಾರೆ.
ಕನ್ನಡದ ಹೆಸರಿನಲ್ಲಿ ಸುಮ್ಮನೆ ಹೋರಾಟ ಸಲ್ಲದು. ಕನ್ನಡ ಮತ್ತು ಸಂಸ್ಕೃತಿ ಹೆಸರಿನಲ್ಲಿ ವಾಟಾಳ್ ನಾಗರಾಜ, ಕನ್ನಡ ಪರ ಸಂಘಟನೆಗಳ ಮುಖಂಡ ಎಷ್ಟು ಅನುದಾನ ಪಡೆದಿದ್ದಾರೆ? ಸರಕಾರದಿಂದ ಪಡೆದ ರೂ. 50 ಲಕ್ಷ ಹಣವನ್ನು ಕನ್ನಡಪರ ಹೋರಾಟಗಾರರು ಎಲ್ಲ ಕನ್ನಡಪರ ಸಂಘಟನೆಗಳಿಗೆ ಹಂಚಿಕೆ ಮಾಡಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ.
ಇವರೆಲ್ಲಾ ಬೆಂಗಳೂರಿನ ಹೋಟೇಲಿನಲ್ಲಿ ಕುಳಿತು ಹೋಟೇಲ್ ತಮ್ಮದೆಂದು ಹೇಳುತ್ತಾರೆ. ವಾಟಾಳ್ ನಾಗರಾಜ ಅವರಿಂದ ನಾವೇನು ಕಲಿಯಬೇಕಾಗಿಲ್ಲ. ಮರಾಠಾ ಸಮುದಾಯಕ್ಕೆ ನೀಡಿರುವ ನಿಗಮಕ್ಕೆ ಬೆಂಬಲವಿದೆ. ಸಿಎಂ ಏನಾದರೂ ಅಭಿವೃದ್ಧಿ ನಿಗಮ ಹಿಂಪಡೆದರೆ ದೊಡ್ಡ ಅನಾಹುತವಾಗುತ್ತೆ ಎಂದು ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರಕಾರ ಮರಾಠಿ ಅಭಿವೃದ್ಧಿ ನಿಗಮ ಮಾಡಿಲ್ಲ. ಮರಾಠಾ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ದೇಶದಲ್ಲಿ ಹಿಂದೂ ಧರ್ಮ ಉಳಿಯಲು ಮತ್ತು ಇಂದು ನಾವೆಲ್ಲ ಹಿಂದೂಗಳಾಗಿ ಉಳಿಯಲು ಛತ್ರಪತಿ ಶಿವಾಜಿ ಮಹಾರಾಜರು ಕಾರಣ. ಶಿವಾಜಿ ಮಹಾರಾಜರು ಹುಟ್ಟಿರದಿದ್ದರೆ ಭಾರತ ಯಾವತ್ತೊ ಪಾಕಿಸ್ತಾನದ ಭಾಗವಾಗುತ್ತಿತ್ತು ಎಂದು ಕವಿಯೊಬ್ಬರು ಹೇಳಿದ್ದಾರೆ. ಶಿವಾಜಿ ಮಹಾರಾಜರು ಕನ್ನಡಿಗರೇ. ಆದಿಲ್ ಶಾಹಿ ಕಾಲದಲ್ಲಿ ಶಿವಾಜಿ ಮಹಾರಾಜರ ತಂದೆ ಶಹಾಜಿ ರಾಜೆ ಬೆಂಗಳೂರಿನ ಸರದಾರರಾಗಿದ್ದರು. ಬೆಂಗಳೂರನ್ನು ಕಂಟ್ರೋಲ್ ಮಾಡುತ್ತಿದ್ದರು. ಬೆಂಗಳೂರು ಆದಿಲ್ ಶಾಹಿ ಮನೆತನದ ಕಂಟ್ರೋಲ್ ಲ್ಲಿತ್ತು. ಮರಾಠಾ ಸುಮದಾಯ ಯಾವಾಗಲೂ ಹಿಂದೂ ಪರವಾಗಿದೆ. ಧರ್ಮದ ಪರವಾಗಿದೆ. ದೇಶದ ಪರವಾಗಿ ಹೋರಾಟ ಮಾಡಿದ ಸಮುದಾಯ ಇದಾಗಿದೆ ಎಂದು ಯತ್ನಾಳ ತಿಳಿಸಿದರು.
ಮರಾಠಾ ಸಮುದಾಯಕ್ಕೆ ಸರಕಾರ ಕಾನೂನಾತ್ಮಕವಾಗಿ ಆ ಪ್ರಾಧಿಕಾರಕ್ಕೆ ಏನೆಲ್ಲ ಕೊಡಲು ಸಾಧ್ಯವೋ ಅದನ್ನೆಲ್ಲ ಕೊಡಬೇಕು. ಆದರೆ, ಮರಾಠಾ ಸಮುದಾಯದ ಕೊಡುಗೆ ದೊಡ್ಡದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮರಾಠಾ ಸಮುದಾಯವರಿದ್ದಾರೆ. ಮೈಸೂರು ಭಾಗದಲ್ಲಿ, ಬೀದರ ಜಿಲ್ಲೆಯಲ್ಲಿ, ದಾವಣಗೆರೆ ಜಿಲ್ಲೆ, ವಿಜಯಪುರ ಜಿಲ್ಲೆಯೂ ಮರಾಠಾ ಸಮುದಾಯದವರಿದ್ದಾರೆ. ಆ ನಿಗಮಕ್ಕೆ ಸಿಎಂ ಇನ್ನೂ ಹೆಚ್ಚಿನ ಅನುದಾನ ನೀಡಬೇಕು ಎಂದು ಯತ್ನಾಳ ಆಗ್ರಹಿಸಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment