ಮದುವೆಗೆ ಬರಬೇಡಿ, ಇರುವ ಸ್ಥಳದಿಂದಲೇ ಆಶೀರ್ವಾದ ಮಾಡಿ: ಹೀಗೊಂದು ಕರೆಯೋಲೆ ಹಂಚಿದ ವಧು-ವರ

Team Newsnap
1 Min Read

ನಮ್ಮ ಮದುವೆಗೆ ಬರಬೇಡಿ, ಎಲ್ಲಿ ಇದ್ದೀರೋ ಅಲ್ಲಿಂದಲೇ ಆಶೀರ್ವಾದ ಮಾಡಿ , ಮರಿಬೇಡಿ ಎಂಬ. ಮದುವೆ ಕರೆಯೋಲೆಯನ್ನು ವಧು-ವರ ಹಂಚಿದ್ದಾರೆ

ಮದುವೆಗೆ ಆಗಮಿಸದೇ ತಾವು ಇರುವ ಸ್ಥಳದಿಂದಲೇ ಆಶೀರ್ವದಿಸಿ ಹೀಗೊಂದು ವಿಶಿಷ್ಟವಾದ ಕರೆಯೋಲೆ ಇದಾಗಿದೆ.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸರ್ಕಾರದ ಮಾರ್ಗ ಸೂಚಿಗಳನ್ನು ಪಾಲಿಸುವ ಕಾರಣಕ್ಕಾಗಿ ಈಗಾಗಲೇ ಮದುವೆಗೆ ಆಮಂತ್ರಿತರಾದವರು ಬರುವುದು ಬೇಡ, ನೀವು ಇರುವ ಸ್ಥಳದಿಂದಲೇ ನೂತನ ವಧುವರರನ್ನು ಹಾರೈಸಿ ಎಂದು ಹೊಸ ಆಮಂತ್ರಣ ಪತ್ರ ಕಳುಹಿದ್ದಾರೆ.

ಚಾಮರಾಜನಗರ ತಾಲೂಕಿನ ವಿ.ಸಿ.ಹೊಸೂರು ಗ್ರಾಮದ ಸುಷ್ಮಾ ಹಾಗೂ ಇದೇ ತಾಲೂಕಿನ ಚನ್ನಪ್ಪನಪುರದ ಶ್ರೇಯಸ್ ಅವರ ಮದುವೆ ಜನವರಿ 22 ಹಾಗೂ 23 ರಂದು ನಿಗದಿಯಾಗಿದೆ.

ಈ ಮದುವೆಗೆ ಆಗಮಿಸುವಂತೆ ನೆಂಟರಿಷ್ಟರಿಗೆ, ಬಂಧು, ಬಳಗಕ್ಕೆ, ಗ್ರಾಮಸ್ಥರಿಗೆ ಎರಡು ಕಡೆಯವರು ಮೂರು ಸಾವಿರಕ್ಕೂ ಹೆಚ್ಚು ಲಗ್ನಪತ್ರಿಕೆ ಹಂಚಿದ್ದರು. ಆದರೆ ಇತ್ತೀಚೆಗೆ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಎರಡೂ ಕುಟುಂಬಗಳು ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಈಗ ಮತ್ತೊಂದು ಆಮಂತ್ರಣ ಪತ್ರ ಕಳುಹಿಸಿ ಮದುವೆಗೆ ಆಗಮಿಸದೆ ತಾವು ಇರುವ ಸ್ಥಳದಿಂದಲೇ ವಧುವರರನ್ನು ಆಶೀರ್ವದಿಸಿ ಎಂದು ಮನವಿ ಮಾಡಿವೆ. ಫೇಸ್ ಬುಕ್, ವಾಟ್ಸ್‌ಪ್‌ ಬಳಸದ ನೆಂಟರಿಷ್ಟರು ಹಾಗೂ ಬಂಧು, ಬಳಗದವರಿಗೆ ನೇರವಾಗಿ ಫೋನ್‍ನಲ್ಲಿ ಕರೆ ಮಾಡಿ ಮನವಿ ಮಾಡುತ್ತಿದ್ದಾರೆ.

Share This Article
Leave a comment