ಸುದ್ದಿಗಾರರ ಜೊತೆ ಮಾತನಾಡಿದ ಸಂಸದೆ ಸುಮಲತಾ, ಇದೊಂದು ರಾಜಕೀಯ ಹೋರಾಟ ಅಲ್ಲ, ನಾವೆಲ್ಲರೂ ರೈತರ ಪರ ನಿಲ್ಲಬೇಕು, ರೈತಪರ ನಿಲುವಿಗೆ ಬದ್ಧರಾಗಬೇಕು ಹಾಗಾಗಿ ಎಲ್ಲರನ್ನೂ ಒಳಗೊಂಡು ಹೋರಾಟ ರೂಪಿಸಲಾಗಿದೆ ಎಂದರು.
ಸಂಕಷ್ಟ ಕಾಲದಲ್ಲಿ ರೈತರ ಪರ ಸರ್ಕಾರ ನಿಲ್ಲುತ್ತಿಲ್ಲ, ರೈತರಿಗೆ ಅನ್ಯಾಯವಾಗುತ್ತಿದೆ, ಕಾವೇರಿ ಕಣಿವೆ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಿಸಬೇಕಾಗಿದೆ. ಇದನ್ನು ಪ್ರತಿಯೊಬ್ಬರು ಅರಿತು ಮುನ್ನಡೆ ಬೇಕಾಗಿದೆ ಎಂದರು.
ಕೇಂದ್ರ ಸರ್ಕಾರದ ಕಡೆ ರಾಜ್ಯ ಸರ್ಕಾರ ಕೈ ತೋರಿಸಬಹುದು. ಆದರೆ ಈ ಹಿಂದೆ ಅಂಬರೀಶ್ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ನೀರಿನ ವಿಷಯದಲ್ಲೇ ರಾಜ್ಯಕ್ಕೆ ಅನ್ಯಾಯವಾದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿದರ್ಶನವಿದೆ ಕೇಂದ್ರ ಸರ್ಕಾರ ಇತ್ಯರ್ಥ ಮಾಡುವುದಾಗಿದ್ದರೆ ಅವರೇಕೆ ರಾಜೀನಾಮೆ ನೀಡುತ್ತಿದ್ದರು ಎಂಬುದನ್ನು ತಿಳಿಯಬೇಕು, ಇಂತಹ ವಿಷಯದಲ್ಲಿ ಸುಮ್ಮನೆ ರಾಜಕಾರಣ ಮಾಡಬಾರದುಎಂದು ಹೇಳಿದರು.
ಕಾವೇರಿ ನದಿ ನೀರು ವಿಚಾರದಲ್ಲಿ ತಮಿಳುನಾಡು ಸದಾ ಜಾಗೃತ ವಹಿಸಲಿದೆ. ಹಲವು ನಿರ್ಧಾರಗಳು ಅವರ ಪರವಾಗಿ ಹೊರಬಂದಿದೆ. ರಾಜ್ಯ ಸರ್ಕಾರ ಸಹ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ರೈತರ ವಿರುದ್ಧ ನಿಲುವು ತಾಳಬಾರದು ಎಂದು ಹೇಳಿದರು.
ನಾನು ಪಕ್ಷೇತರ ಸಂಸದೆ, ರೈತರ ಪರ ಹೋರಾಟಕ್ಕೆ ಸದಾ ನಿಲ್ಲಲಿದ್ದೇನೆ, ಈ ವಿಚಾರವಾಗಿ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ, ಕಾವೇರಿ ನದಿ ನೀರಿನ ವಿಚಾರದಲ್ಲಿ ಯಾರು ಸಹ ರಾಜಕಾರಣ ಮಾಡಬಾರದು ಎಂದು ಹೇಳಿದರು.
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
This website uses cookies.
Leave a Comment