ಗಾಂಧೀಜಿ ಅವರ ಅಹಿಂಸಾ ಮಾರ್ಗದ ಕುರಿತು ಇತ್ತೀಚಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ನಟಿ ಕಂಗನಾ ರಣಾವತ್ ವಿರುದ್ಧ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗರಂ ಆಗಿ ‘ಹೊಟ್ಟೆ ಪಾಡಿಗಾಗಿ ಬಟ್ಟೆ ಬಿಚ್ಚಿ ಓಡಾಡೋರಿಗೆ ಗಾಂಧಿ ಮೌಲ್ಯ ಅಂದ್ರೆ ಏನು ಗೊತ್ತು’ ಎಂದು ತಾವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.
ಸ್ವಾತಂತ್ರ್ಯ ಸಂಭ್ರಮದ ಏಳುವರೆ ದಶಕದ ವರ್ಷಾಚರಣೆ ಹಿನ್ನೆಲೆ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ರಮೇಶ್ ಕುಮಾರ್ , ಬ್ರಿಟಿಷ್ರ ವಾರಸ್ದಾರರಾಗಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್ ಎಂದಿದ್ದಾರೆ.
ಹಿಂದೂ ರಾಷ್ಟ್ರದ ಕನಸಿಗಾಗಿ ಸಿಎಎ ತಂದು ಗಲಭೆ ಸೃಷ್ಟಿಸುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಗಳನ್ನು ನೆಹರು ಅವರು ಸ್ಥಾಪಿಸಿದರೆ ಅದೇ ಉದ್ಯಮಗಳನ್ನು ಅವರು ಖಾಸಗಿಕರಣಗೊಳಿಸಿದರು. ಇದೇ ನಮಗೂ ನಿಮಗೂ ಇರುವ ವ್ಯತ್ಯಾಸ ಎಂದು ರಮೇಶ್ ಕುಮಾರ್ ಗುಡುಗಿದರು.
ಗಾಂಧಿ ಬಗ್ಗೆ ಮಾತನಾಡಿರುವ ನಟಿಯ ವಿರುದ್ಧ ಖಂಡಿಸಬೇಕೆಂದು ರೇವಣ್ಣ ಚೀಟಿ ಕೊಟ್ಟು ಹೇಳಿದ್ರು. ಅಂತವರ ಬಗ್ಗೆ ಈ ವೇದಿಕೆಯಲ್ಲಿ ಮಾತನಾಡಿದರೆ ಅವರು ದೊಡ್ಡವರಾಗುತ್ತಾರೆ. ಹೊಟ್ಟೆ ಪಾಡಿಗಾಗಿ ಬಟ್ಟೆ ಬಿಚ್ಚಿ ಓಡಾಡೋರಿಗೆ ಗಾಂಧಿ ಮೌಲ್ಯ ಅಂದ್ರೆ ಏನು ಗೊತ್ತು ಬಿಡಿ’ ಎಂದು ರಮೇಶ್ ಕುಮಾರ್ ಟಾಂಗ್ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು