ಗಾಂಧೀಜಿ ಅವರ ಅಹಿಂಸಾ ಮಾರ್ಗದ ಕುರಿತು ಇತ್ತೀಚಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ನಟಿ ಕಂಗನಾ ರಣಾವತ್ ವಿರುದ್ಧ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗರಂ ಆಗಿ ‘ಹೊಟ್ಟೆ ಪಾಡಿಗಾಗಿ ಬಟ್ಟೆ ಬಿಚ್ಚಿ ಓಡಾಡೋರಿಗೆ ಗಾಂಧಿ ಮೌಲ್ಯ ಅಂದ್ರೆ ಏನು ಗೊತ್ತು’ ಎಂದು ತಾವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.
ಸ್ವಾತಂತ್ರ್ಯ ಸಂಭ್ರಮದ ಏಳುವರೆ ದಶಕದ ವರ್ಷಾಚರಣೆ ಹಿನ್ನೆಲೆ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ರಮೇಶ್ ಕುಮಾರ್ , ಬ್ರಿಟಿಷ್ರ ವಾರಸ್ದಾರರಾಗಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್ ಎಂದಿದ್ದಾರೆ.
ಹಿಂದೂ ರಾಷ್ಟ್ರದ ಕನಸಿಗಾಗಿ ಸಿಎಎ ತಂದು ಗಲಭೆ ಸೃಷ್ಟಿಸುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಗಳನ್ನು ನೆಹರು ಅವರು ಸ್ಥಾಪಿಸಿದರೆ ಅದೇ ಉದ್ಯಮಗಳನ್ನು ಅವರು ಖಾಸಗಿಕರಣಗೊಳಿಸಿದರು. ಇದೇ ನಮಗೂ ನಿಮಗೂ ಇರುವ ವ್ಯತ್ಯಾಸ ಎಂದು ರಮೇಶ್ ಕುಮಾರ್ ಗುಡುಗಿದರು.
ಗಾಂಧಿ ಬಗ್ಗೆ ಮಾತನಾಡಿರುವ ನಟಿಯ ವಿರುದ್ಧ ಖಂಡಿಸಬೇಕೆಂದು ರೇವಣ್ಣ ಚೀಟಿ ಕೊಟ್ಟು ಹೇಳಿದ್ರು. ಅಂತವರ ಬಗ್ಗೆ ಈ ವೇದಿಕೆಯಲ್ಲಿ ಮಾತನಾಡಿದರೆ ಅವರು ದೊಡ್ಡವರಾಗುತ್ತಾರೆ. ಹೊಟ್ಟೆ ಪಾಡಿಗಾಗಿ ಬಟ್ಟೆ ಬಿಚ್ಚಿ ಓಡಾಡೋರಿಗೆ ಗಾಂಧಿ ಮೌಲ್ಯ ಅಂದ್ರೆ ಏನು ಗೊತ್ತು ಬಿಡಿ’ ಎಂದು ರಮೇಶ್ ಕುಮಾರ್ ಟಾಂಗ್ ನೀಡಿದ್ದಾರೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ