ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಲು ಅವರ ಮನೆಗೆ ಹೋಗುವವರು ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ.
ಈ ಕುರಿತು ಆರ್ಟಿ ನಗರದ ಸಿಎಂ ಮನೆ ಮುಂದೆ ಬೋರ್ಡ್ ಕೂಡ ಹಾಕಲಾಗಿದೆ.
ಮುಖ್ಯಮಂತ್ರಿ ನಿವಾಸಕ್ಕೆ ಬರುವವರು ಮೊಬೈಲ್ ತರುವಂತಿಲ್ಲ ಎಂದು ತಿಳಿಸಲಾಗಿದೆ. ಪೊಲೀಸರು ಪ್ರತಿಯೊಬ್ಬರ ತಪಾಸಣೆ ನಡೆಸಿ ಮೊಬೈಲ್ ಇಲ್ಲವೆಂದು ಖಚಿತ ಪಡಿಸಿಕೊಂಡ ನಂತರ ಒಳಗಡೆ ಬಿಡಲಾಗುತ್ತದೆ.
ಮುಖ್ಯಮಂತ್ರಿ ಭೇಟಿ ಮಾಡುವವರು ಸಮಸ್ಯೆ ಹೇಳಿಕೊಂಡು ಮನವಿ ಸಲ್ಲಿಸಿದ ಮೇಲೆ ಸೆಲ್ಫಿಗೆ ಮುಂದಾಗುತ್ತಾರೆ. ಇದರಿಂದಾಗುವ ಕಿರಿಕಿರಿ ತಪ್ಪಿಸಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಇಲ್ಲಿಯವರೆಗೆ ಮುಖ್ಯಮಂತ್ರಿ ಭೇಟಿ ಮಾಡುವ ಸಾರ್ವಜನಿಕರು ತಮ್ಮ ಮೊಬೈಲ್ ತೆಗೆದುಕೊಂಡು ಹೋಗಬಹುದಿತ್ತು. ಇನ್ಮುಂದೆ ಆ ರೀತಿ ಇಲ್ಲ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ