ಮಂಡ್ಯ: ಸಹೋದರಿಯ ಮನೆಗೆ ಭೇಟಿ ನೀಡಿದ ಬಳಿಕ ವೈದ್ಯರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರಿನ ಕುದುರಗುಂಡಿಯಲ್ಲಿ ನಿನ್ನೆ ಜರುಗಿದೆ
ಡಾ.ವೇಣುಗೋಪಾಲ್ (57) ಆತ್ಮಹತ್ಯೆ ಮಾಡಿಕೊಂಡವರು ಮಂಡ್ಯದ ಸಾಂಜೋ ಆಸ್ಪತ್ರೆಯಲ್ಲಿ ಸರ್ಜನ್ ಆಗಿದ್ದರು.
ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಡಾ. ವೇಣುಗೋಪಾಲ್ ನಿನ್ನೆ ಕೂಡ ಹಲವು ರೋಗಿಗಳಿಗೆ ಚಿಕಿತ್ಸೆ ನೀಡಿ, ಮೈಸೂರಿಗೆ ಹೋಗುತ್ತೇನೆ ಎಂದು ಹೇಳಿ ಹೋಗಿದ್ದರು.
ಆದರೆ ಮೈಸೂರಿಗೆ ಹೋಗದೆ ಮದ್ದೂರು ತಾಲೂಕಿನ ಕುದುರಗುಂಡಿ ಬಳಿ ಕೆರೆಯ ಸಮೀಪ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋದರಿ ಸಾವಿನಿಂದ ಕುಗ್ಗಿದ್ದರು ಡಾ. ವೇಣುಗೋಪಾಲ್ ಅವರಿಗೆ ಬೇರೆ ಏನಾದರೂ ಆರೋಗ್ಯ ಸಮಸ್ಯೆಯಿತ್ತಾ ಎಂಬುದು ಗೊತ್ತಾಗಿಲ್ಲ. ಆದರೆ ಮಾನಸಿಕವಾಗಿ ತುಂಬ ಬಳಲಿದ್ದರು.
ಕಳೆದ ವರ್ಷ ಇವರ ತಂಗಿ ಗಾಯತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಆಗಿನಿಂದಲೂ ಡಾ. ವೇಣುಗೋಪಾಲ್ ದುಃಖದಲ್ಲೇ ಇದ್ದು, ಖಿನ್ನತೆಗೆ ಒಳಗಾಗಿದ್ದರು. ಮೂರು ದಿನಗಳ ಹಿಂದೆ ತಂಗಿ ಗಾಯತ್ರಿಯ ವರ್ಷದ ತಿಥಿಯಿತ್ತು.
ಅಂದು ವೇಣುಗೋಪಾಲ್ ಅವರು ತಮ್ಮ ಸೋದರಿಯ ಸಮಾಧಿ ಪಕ್ಕ ಕುಳಿತು ಅತ್ತಿದ್ದರು. ನಿನ್ನೆ ಆಸ್ಪತ್ರೆಯಿಂದ ನೇರವಾಗಿ ಮೈಸೂರಿಗೆ ಹೋಗುವ ಮೊದಲು ಕುದುರುಗುಂಡಿಯಲ್ಲಿರುವ ತಂಗಿ ಮನೆಗೆ ಹೋಗಿದ್ದರು.ಜಿಎಸ್ ಟಿ ಸಂಗ್ರಹ : ರಾಜ್ಯಕ್ಕೆ ಎರಡನೇ ಸ್ಥಾನ – ಸಿ. ಶಿಖಾ
ಆ ಮನೆಯಿಂದ ಹೊರಬಿದ್ದವರು ಸಮೀಪದ ಕೆರೆಯ ಬಳಿ ಹೋಗಿ, ಅಲ್ಲೇ ಗದ್ದೆಯಲ್ಲಿ ನೇಣುಬಿಗಿದುಕೊಂಡಿದ್ದಾರೆ. ಇವರ ಶವ ಪರೀಕ್ಷೆ ನಡೆಸಲಾಗುತ್ತಿದೆ. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು