ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಸದಸ್ಯರು ಸೆಪ್ಟೆಂಬರ್ ೨೪ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಿದ್ದಾರೆ.
ಗುತ್ತಿಗೆ ಪದ್ದತಿ ರದ್ದು, ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ಮುಂತಾದ ಬೇಡಿಕೆಗಳನ್ನು ಸರ್ಕಾರ ಈಡೇರಿಲ್ಲ. ನಾವು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದರೂ ಸರ್ಕಾರ ಎಚ್ಚೆತ್ತಿಲ್ಲ. ಹಾಗಾಗಿ ಪ್ರತಿಭಟನೆಗೆ ಮುಂದಾಗಿದ್ದೇವೆ. ಪ್ರತಿಭಟನೆಯ ವೇಳೆ ಕೋವಿಡ್ – ೧೯ಕ್ಕೆ ಸಂಬಂಧಿಸಿದಮನತೆ ಯಾವುದೇ ವರದಿಯನ್ನೂ ನೀಡುವದಿಲ್ಲ ಎಂದು ಸಂಘದ ಜಿಲ್ಲಾ ಉಪಾಧ್ಯಕ್ಷ ರಾಜೇಶ್ ತಿಳಿಸಿದರು.
ಕೊರೋನಾದ ಪರಿಣಾಮವಾಗಿ ದೇಶ, ರಾಜ್ಯದ ಆರ್ಥಿಕತೆಗಳು ಕುಂಟುತ್ತ ಸಾಗಿವೆ. ಸೋಂಕಿತರಲ್ಲಿ ಅನೇಕರು ಸಾವಿಗೀಡಾಗುತ್ತಿದ್ದಾರೆ. ಆದಷ್ಟು ಬೇಗ ಸರ್ಕಾರ ವೈದ್ಯರಿಗೆ ಅನುಕೂಲವಾಗುಂಥಹ ಯೋಜನೆ ರೂಪಿಸಬೇಕಾಗಿದೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ