ಬಾಲಿವುಡ್ ನಟ, ಬಡವರ ಕಷ್ಟ ಗಳಿಗೆ ಸ್ಪಂದಿಸುವ ಸೋನು ಸೂದ್ಗೆ ಸೇರಿದ ನಿವಾಸ, ಕಚೇರಿ ಸೇರಿ 6 ಜಾಗಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆಂದು ಮೂಲಗಳಿಂದ ಗೊತ್ತಾಗಿದೆ.
ದೆಹಲಿ ರಾಜ್ಯ ಸರ್ಕಾರದ ಮೆಂಟರ್ಷಿಪ್ ಪ್ರೋಗ್ರಾಮ್ ಫಾರ್ ಸ್ಕೂಲ್ ಸ್ಟೂಡೆಂಟ್ಸ್ ಕಾರ್ಯಕ್ರಮಕ್ಕೆ ಸೋನು ಸೂದ್ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾದ ನಂತರ ಈ ಬೆಳವಣಿಗೆ ಆಗಿದೆ.
ನಟ ಸೋನುಸೂದ್ ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರೆಂಬ ಚರ್ಚೆಯಾಗಿತ್ತು. ಈ ಕುರಿತಂತೆ ಮಾಧ್ಯಮ ಪ್ರಶ್ನೆಗೆ ಉತ್ತರಿಸಲು ಸೋನುಸೂದ್ ಕೂಡ ನಿರಾಕರಿಸಿದ್ದರು.
ಸೋನು ಸೂದ್ ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಮತ್ತು ನಂತರ ಅಸಹಾಯಕರಿಗೆ ಸಹಾಯ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.
ವಲಸಿಗ ಕಾರ್ಮಿಕರ ಪ್ರಯಾಣಕ್ಕಾಗಿ ವಿಶೇಷ ವಿಮಾನ ವ್ಯವಸ್ಥೆಯನ್ನೂ ಮಾಡಿದ್ದ ಸೋನುಸೂದ್ ಬಗ್ಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದ್ದವು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು