ನಾನು ಸಿಎಂ ಆಗಬೇಕು ಎಂದು ಕೂಗಬೇಡಿ :ಒಳ ಸಂಚು ಶುರುವಾಗುತ್ತೆ – ಡಾ. ಪರಮೇಶ್ವರ್

Team Newsnap
1 Min Read

ನನ್ನನ್ನು ಸಿಎಂ ಸಿಎಂ ಎಂದು ಹಾಗೂ ನಾನು ಸಿಎಂ ಆಗಬೇಕು ಎಂದು ಕೂಗಿದರೆ ಒಳ ಸಂಚು ಶುರುವಾಗುತ್ತದೆ ಎಂದು ಅಭಿಮಾನಿಗಳಿಗೆ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ತಾಕೀತು ಮಾಡಿದರು.

ಕಾಂಗ್ರೆಸ್‌ನಲ್ಲಿ ಮತ್ತೆ ದಲಿತ ಸಿಎಂ ವಿಚಾರ ಚಚೆ೯ಗೆ ಬರುತ್ತಿರುವುದಕ್ಕೆ ಸಾಕ್ಷಿಯಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಪಾಲ್ಗೊಂಡಿದ್ದ ಕೊರಟಗೆರೆಯ ಚಿಕ್ಕಗುಂಡಗಲ್ ಗ್ರಾಮದ ಕಾರ್ಯಕ್ರಮದಲ್ಲಿ ಈ ರೀತಿ ತಾಕೀತು ಮಾಡಿದರು,

ಸಿಎಂ ವಿಚಾರ ಎತ್ತಿದರೆ ನನಗೆ ಬಹಳ ಕಷ್ಟ ಆಗುತ್ತದೆ. ನೀವು ಇಲ್ಲಿ ಹೇಳೋಕೆ ಪ್ರಾರಂಭಿಸಿದರೆ. ಅಲ್ಲಿ ನನಗೆ ಹೊಡೆತ ಬೀಳೋಕೆ ಶುರುವಾಗುತ್ತದೆ. ನೀವು ಮನಸ್ಸಿನಲ್ಲಿ ಬೇಕಾದರೇ ಹೇಳಿಕೊಳ್ಳಿ. ನಿಮ್ಮ ಆಶೀರ್ವಾದ ಹಾಗೂ ಪರಮಾತ್ಮನ ಇಚ್ಛೆ ಇದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಮುಖ್ಯಮಂತ್ರಿ ಸ್ಥಾನ ಯಾರಿಗೆ ನೀಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

Share This Article
Leave a comment