ಮಗಳ ತಿಂಗಳ ತಿಥಿ ಮಾಡಲು ಬಂದಿದ್ದ ಅಪ್ಪ, ಅಳಿಯನ ಮನೆಯ ಎದುರೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ.
ದೊಡ್ಡಗದ್ದವಳ್ಳಿ ಗ್ರಾಮದ ನಾಗರಾಜ್ (55) ಮೃತ ವ್ಯಕ್ತಿ.

ಮೃತರ ಪುತ್ರಿ ಹೇಮಶ್ರೀ ಅ.30 ರಂದು ಸಾವನ್ನಪ್ಪಿದ್ದರು. ಮಗಳ ತಿಂಗಳ ತಿಥಿ ಕಾರ್ಯ ಮಾಡಲು ನಾಗರಾಜ್ ನಿನ್ನೆ ಮಾಳೆಗೆರೆ ಗ್ರಾಮಕ್ಕೆ ಆಗಮಿಸಿದ್ದರು.
ಆದರೆ ಅಳಿಯ ಪ್ರವೀಣ್ ಹಾಗೂ ಕುಟುಂಬಸ್ಥರು ಮನೆಗೆ ಬೀಗ ಹಾಕಿ ತೆಳಿದ್ದರು. ಮಗಳ ತಿಥಿ ಕಾರ್ಯಕ್ಕೆ ಮಾಡಲು ಬೆಳಗ್ಗೆಯಿಂದ ಕಾದರು ಯಾರು ಬಾರದ ಹಿನ್ನೆಲೆಯಲ್ಲಿ, ಮನೆಯ ಬಾಗಿಲ ಬಳಿಯೇ ಎಡೆ ಇಟ್ಟಿರೋ ನಾಗರಾಜ್, ಬಳಿಕ ಮನನೊಂದು ಮೊಬೈಲ್ನಲ್ಲಿ ವಿಡಿಯೋ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ
ನನ್ನ ಮಗಳ ಸಾವಿಗೆ ಪತಿ ಪ್ರವೀಣ್, ಅತ್ತೆ ಭದ್ರಮ್ಮ ಹಾಗೂ ಸೋಮಣ್ಣ ಎಂಬವರೇ ಕಾರಣ, ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ. ದಯಮಾಡಿ ಅವರನ್ನು ಸಾಯುವವರೆಗೂ ಜೈಲಿಗೆ ಹಾಕಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅರೇಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಕುಟುಂಬಸ್ಥರಿಗೆ ಹುಡುಕಾಟ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು