crime

ವರದಕ್ಷಿಣೆ ಕಿರುಕುಳ : ಇಬ್ಬರು ಮಕ್ಕಳು ಸೇರಿ ಮೂವರು ಸಹೋದರಿಯರು ಬಾವಿಗೆ ಹಾರಿ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಒಂದೇ ಕುಟುಂಬದ ಇಬ್ಬರು ಮಕ್ಕಳು, ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆ ರಾಜಸ್ಥಾನದ ಜೈಪುರದ ಚಪಿಯಾ ಗ್ರಾಮದಲ್ಲಿ ಜರುಗಿದೆ.

ಮೂವರು ಹೆಣ್ಣು ಮಕ್ಕಳನ್ನು ಒಂದೇ ಕುಟುಂಬಕ್ಕೆ ಕೊಟ್ಟು ಮದುವೆ ಮಾಡಲಾಗಿತ್ತು. ಆದರೆ ಆ ಕುಟುಂಬದಲ್ಲಿ ಮೂವರು ಸಹೋದರಿಯರಿಗೂ ಪತಿ ಮನೆಯವರು ಸದಾ ವರದಕ್ಷಿಣೆ ಕಿರುಕುಳ ಕೊಡ್ತಿದ್ದರಂತೆ. ಈ ನಿತ್ಯ ನರಕ ತಾಳಲಾರದೆ ಮೂವರೂ ಅಕ್ಕತಂಗಿಯರು ತಮ್ಮ ಎರಡು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ ಇಬ್ಬರು ಗರ್ಭಿಣಿಯಾಗಿದ್ದರು.ಮೃತ ಮಕ್ಕಳಲ್ಲಿ ಒಂದು 4 ವರ್ಷದ ಗಂಡು ಮಗು ಹಾಗೂ ಮತ್ತೊಂದು ಕೇವಲ 27 ದಿನಗಳ ಹಸುಗೂಸು ಸೇರಿದೆ.

ಇದನ್ನು ಓದಿ : ಕೆಸರು, ನೀರಿನಲ್ಲಿ ಸಾಮಾನ್ಯ ಮಹಿಳೆಯಂತೆ ನಡೆದುಕೊಂಡು ಹೋಗುವ ಐಎಎಸ್ ಅಧಿಕಾರಿ 

ನನ್ನ ಸಹೋದರಿಯರ ಮೇಲೆ ವರದಕ್ಷಿಣೆಗಾಗಿ ನಿರಂತರವಾಗಿ ಅವರ ಪತಿ ಮನೆಯವರು ಥಳಿಸುತ್ತಿದ್ದರು. ಮೇ 25ರಂದು ಅವರು ನಾಪತ್ತೆಯಾದಾಗ, ಹುಡುಕಾಡಿ ಸೋತು ಕೊನೆಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೆವು. ಮಹಿಳಾ ಸಹಾಯವಾಣಿ ಮತ್ತು ಮಹಿಳಾ ಆಯೋಗವನ್ನು ಕೂಡ ಸಂಪರ್ಕಿಸಿದ್ದೆವು. ಆದರೆ ಯಾರಿಂದಲೂ ಸಹಾಯ ಸಿಕ್ಕಿರಲಿಲ್ಲ ಎಂದು ಮೃತರ ಸಹೋದರ ಸಂಬಂಧಿ ಹೇಮರಾಜ್ ಮೀನಾ ಅಳಲು ತೋಡಿಕೊಂಡಿದ್ದಾರೆ.

ಇನ್ನು ಆತ್ಮಹತ್ಯೆ ಶರಣಾದ ಕಿರಿಯ ಸಹೋದರಿ, ಕಮಲೇಶರ ವಾಟ್ಸಾಪ್​ಗೆ ನಮ್ಮ ಸಾವಿಗೆ ಅತ್ತೆ ಮಾವನೇ ಕಾರಣ. ವರದಕ್ಷಿಣೆಗಾಗಿ ಕಿರುಕುಳ ಕೊಡುತ್ತಿದ್ದಾರೆ. ಹೀಗಾಗಿ ನಾವು ಜೊತೆಯಾಗಿ ಸಾಯಲು ನಿರ್ಧರಿಸಿದ್ದೇವೆ ಎಂದು ಮೆಸೇಜ್​ ಕಳಿಸಿದ್ದಾರೆ. ಕಾಣೆಯಾದ ನಾಲ್ಕು ದಿನಗಳ ಬಳಿಕ ಮೂವರು ಸಹೋದರಿಯರು ಹಾಗೂ ಎರಡು ಮಕ್ಕಳ ಶವಗಳು ಬಾವಿಯೊಂದರಲ್ಲಿ ಪತ್ತೆಯಾಗಿದ್ದವು. ಮೂವರು ಪಾಪಿ ಪತಿಯರು ಮತ್ತು ಅತ್ತೆ ಮಾವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕುಟುಂಬದ ಇತರೆ ಸದಸ್ಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024