ಕರ್ನಾಟಕದ ಹೃದಯ ಶಸ್ತ್ರಚಿಕಿತ್ಸೆ ತಜ್ಞ ಡಾ. ದೇವಿ ಶೆಟ್ಟಿ ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಹೃದಯ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡವನ್ನು ಸೋಮವಾರ ಸೇರಿದ್ದಾರೆ.
ಲಘು ಹೃದಯಾಘಾತದ ಬಳಿಕ ಈಗಾಗಲೆ ಆಯಂಜಿಯೋಪ್ಲಾಸ್ಟಿಗೆ ಒಳಗಾಗಿರುವ 48 ವರ್ಷದ ಗಂಗೂಲಿ ಅವರಿಗೆ ನೀಡಬೇಕಾಗಿರುವ ಮುಂದಿನ ಚಿಕಿತ್ಸೆಯ ಬಗ್ಗೆ ಡಾ. ದೇವಿ ಶೆಟ್ಟಿ ವೈದ್ಯರ ತಂಡದೊಂದಿಗೆ ಚರ್ಚೆ ಮಾಡಿದರು.
ಗಂಗೂಲಿ ಹೃದಯ ಚಿಕಿತ್ಸೆಗಾಗಿ ಒಟ್ಟು 9 ವೈದ್ಯರ ತಂಡವನ್ನು ರಚಿಸಲಾಗಿದೆ. ಕೋಲ್ಕತದ ವುಡ್ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಗಂಗೂಲಿಗೆ ಚಿಕಿತ್ಸೆ ನೀಡುತ್ತಿರುವ ತಂಡದೊಂದಿಗೆ ಕನ್ನಡಿಗ ಡಾ. ದೇವಿ ಶೆಟ್ಟಿ ಜತೆಗೆ ಮತ್ತೋರ್ವ ಹೃದಯ ತಜ್ಞ ಡಾ. ಆರ್ಕೆ ಪಾಂಡೆ ಕೂಡ ವರ್ಚುವಲ್ ಮೂಲಕ ಪಾಲ್ಗೊಂಡಿ ದ್ದಾರೆ.
ಅಮೆರಿಕದಿಂದಲೂ ವೈದ್ಯರೊಬ್ಬರು ದೂರವಾಣಿ ಮೂಲಕ ವೈದ್ಯರ ತಂಡದೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಡಾ. ದೇವಿ ಶೆಟ್ಟಿ ಮಂಗಳವಾರ ಕೋಲ್ಕತದಲ್ಲಿ ಗಂಗೂಲಿ ಅವರನ್ನು ಭೇಟಿಯಾಗಿ ಪರಿಶೀಲನೆ ನಡೆಸಲಿದ್ದಾರೆ.
ಗಂಗೂಲಿಗೆ ಈಗಲೆ ಮತ್ತೊಮ್ಮೆ ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡುವ ಅಗತ್ಯವಿಲ್ಲ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಈ ಚಿಕಿತ್ಸೆ ನೀಡಬಹುದು. ಗಂಗೂಲಿ ಈಗ ಯಾವುದೇ ರೀತಿಯ ಎದೆ ನೋವು ಹೊಂದಿಲ್ಲ ಎಂದು ವೈದ್ಯರ ತಂಡ ಒಮ್ಮತದ ಅಭಿಪ್ರಾಯ ಕೈಗೊಂಡಿದೆ ಎಂದು ಆಸ್ಪತ್ರೆಯ ಎಂಡಿ ಹಾಗೂ ಸಿಇಒ ಡಾ. ರೂಪಾಲಿ ಬಸು ತಿಳಿಸಿದ್ದಾರೆ.
ವೈದ್ಯರ ತಂಡದ ಸಭೆಯಲ್ಲಿ ಗಂಗೂಲಿ ಕುಟುಂಬದ ಸದಸ್ಯರೂ ಪಾಲ್ಗೊಂಡಿದ್ದರು ಮತ್ತು ಅವರಿಗೆ ಮುಂದಿನ ಚಿಕಿತ್ಸಾ ಯೋಜನೆಯ ಬಗ್ಗೆ ವಿವರಿಸಲಾಗಿದೆ. ಗಂಗೂಲಿ ಬುಧವಾರ ಮನೆಗೆ ಮರಳಿದ ಬಳಿಕವೂ ವೈದ್ಯರ ತಂಡ ಆರೋಗ್ಯದ ಮೇಲೆ ಕಣ್ಣಿಡಲಿದೆ ಎಂದು ರೂಪಾಲಿ ತಿಳಿಸಿದ್ದಾರೆ.
ಗಂಗೂಲಿ ಹೃದಯದ ರಕ್ತನಾಳಗಳಲ್ಲಿದ್ದ 3 ಬ್ಲಾಕ್ಗಳನ್ನು ಈಗಾಗಲೆ ತೆರವುಗೊಳಿಸಲಾಗಿದೆ. ಒಂದು ಸ್ಟೆಂಟ್ ಕೂಡ ಅಳವಡಿಸಲಾಗಿದೆ. ಈ ನಡುವೆ ಅವರ ಕರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿತ್ತು.
ಗಂಗೂಲಿ ಬುಧವಾರ ಬಿಡುಗಡೆ ಹೊಂದಿ ಮನೆಗೆ ಮರಳುವ ನಿರೀಕ್ಷೆ ಇದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಆದರೆ ಮುಂದಿನ ಕೆಲ ದಿನಗಳಲ್ಲಿ ಅಥವಾ ವಾರಗಳ ನಂತರ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿ ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ಎನ್ನಲಾಗಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment