Mandya

ಡಾ. ಕುಮಾರ ನೂತನ ಡಿಸಿಯಾಗಿ ಅಧಿಕಾರ ಸ್ವೀಕಾರ

ಮಂಡ್ಯ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕುಮಾರ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.

ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಹೆಚ್ಎನ್ ಗೋಪಾಲಕೃಷ್ಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರವನ್ನು ಹಸ್ತಾಂತರ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಕುಮಾರ್ ಅವರನ್ನು ಸರ್ಕಾರ ಮಂಡ್ಯ ಜಿಲ್ಲಾಧಿಕಾರಿಯನ್ನಾಗಿ ನಿಯೋಜಿಸಿ ಆದೇಶಿಸಿತ್ತು.

ಈ ಹಿಂದೆ ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ‌ ಅಪರ ಜಿಲ್ಲಾಧಿಕಾರಿಯಾಗಿ, ವಿಜಯಪುರ ತುಮಕೂರು ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಂದಾಯ ಇಲಾಖೆಯಲ್ಲಿ ಹೆಚ್ಚಿನ‌ ಸೇವೆ ಸಲ್ಲಿಸಿದ್ದಾರೆ.

ಅಧಿಕಾರ ಸ್ವೀಕಾರದ ನಂತರ ಮಾತನಾಡಿದ ಕುಮಾರ್ ಕಂದಾಯ ಇಲಾಖೆಯಲ್ಲಿ ಯಾವುದೇ ತೊಂದರೆ ಇದ್ದರೂ ಪರಿಶೀಲಿಸಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಪಾರದರ್ಶಕ ಹಾಗೂ ಪ್ರತಿಸ್ಪಂಧನಾತ್ಮಕ ಆಡಳಿತವನ್ನು ನೀಡುವುದು ಮುಖ್ಯ ಗುರಿ ಎಂದು ಡಿಸಿ ಹೇಳಿದರು

ಕಂದಾಯ ಇಲಾಖೆಯಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಹಾಗಾಗಿ ಜಿಲ್ಲಾಧಿಕಾರಿ ಕಛೇರಿ ಹಾಗೂ ಕಂದಾಯ ಇಲಾಖೆ ಯಾವುದೇ ಸಮಸ್ಯೆ ಇದ್ದಲ್ಲಿ ಪರೀಶಿಲನೆ ನಡೆಸಿ ಸಕಲಾತ್ಮಕವಾಗಿ ಸ್ಪಂದಿಸಿ ಸಾರ್ವಜನಿಕರಿಗೆ ಬಹುಬೇಗ ಆಡಳಿತ ಸೇವೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುವೆ ಎಂದರು‌.

ಪಾರದರ್ಶಕವಾಗಿ ಆಡಳಿತ ನಡೆಸಿ ಸಾರ್ವಜನಿಕರಿಗೆ ಬಹುಬೇಗ ಆಡಳಿತ ಸೇವೆ ತಲುಪಿಸುವುದು. ಈ ಮೂಲಕ ಕಡತ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.

ಅಧಿಕಾರ ಎಂಬುದು ಸಾರ್ವಜನಿಕರ ಸೇವೆ ಮಾಡಲು ಸಿಕ್ಕಿರುವ ಅವಕಾಶ. ರೈತರಿಗೆ ಭೂಮಿ ತಂತ್ರಾಂಶ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಅರಿವು‌ ಮೂಡಿಸಿ ಕಲಾಮಿತಿಯೊಳಗೆ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.ಶಕ್ತಿ ಯೋಜನೆ – ವಾರದಲ್ಲಿ ಸಂಚಾರ ಮಾಡಿದ ಮಹಿಳೆಯರೆಷ್ಟು? ಖರ್ಚು ಎಷ್ಟು?

ಕೃಷಿಕರ ಸಮಸ್ಯೆಗಳನ್ನು ಆದ್ಯತೆ ನೀಡಿ ಪರಿಹರಿಸಲಾಗುವುದು. ಮಳೆಯ ಕೊರತೆ ಉಂಟಾದಲ್ಲಿ ಉಂಟಾಗಬಹುದಾದ ತೊಂದರೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಕೂಡಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದರು.

Team Newsnap
Leave a Comment

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024