ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೆ ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದೆ.
ರಾಜ್ಯ ಸರ್ಕಾರ ಸಿ.ಎನ್.ಮಂಜುನಾಥ್ ಸೇವಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿದೆ. ನಿರ್ದೇಶಕರಾಗಿ ಅವಧಿ ಮುಕ್ತಾಯವಾದ ಹಿನ್ನೆಲೆ ಮುಂದುವರಿಸುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ಅವರ ಸೇವಾವಧಿ ವಿಸ್ತರಿಸಲಾಗಿದೆ.ಇದನ್ನು ಓದಿ –ಮಡಿಕೇರಿ ಖಜಾನೆ ಇಲಾಖೆ ಗುಮಾಸ್ತ 5 ಸಾವಿರ ರು ಲಂಚ ಸ್ವೀಕರಿಸುವ ವೇಳೆ ACB ಬಲೆಗೆ
ಡಾ. ಸಿ.ಎನ್.ಮಂಜುನಾಥ್ ಅವರ ಸಾಧನೆ ಮತ್ತು ಆಡಳಿತ ವೈಖರಿ ಪರಿಗಣಿಸಿ ಮುಖ್ಯಮಂತ್ರಿಗಳು ಮುಂದುವರಿಸಿದ್ದಾರೆ.
ತಮ್ಮ ಸೇವಾವಧಿ ವಿಸ್ತರಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಮಂಜುನಾಥ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್.ಮಂಜುನಾಥ್ ನಾಳೆಗೆ ಅಂತ್ಯವಾಗುತ್ತಿತ್ತು ಅವರನ್ನೇ ಮುಂದುವರಿಸಬೇಕು ಎಂದು ಸಾರ್ವಜನಿಕ ವಲಯದಲ್ಲಿ ಒತ್ತಾಯವಾಗಿತ್ತು. ಮಂಜುನಾಥ್ ಅವರನ್ನು ಮುಂದುವರಿಸುವಂತೆ ಅನೇಕ ಕಡೆ ಪ್ರತಿಭಟನೆಗೂ ಕರೆ ನೀಡಲಾಗಿತ್ತು. ಅಷ್ಟರಲ್ಲೇ ಎಚ್ಚೆತ್ತ ಸರ್ಕಾರ ಸೇವಾವಧಿ ವಿಸ್ತರಿಸಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ