ರಸ್ತೆ ಅಪಘಾತದಲ್ಲಿ ಶರಣ ಬಸವ ವಿವಿ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಸಾವು

Team Newsnap
1 Min Read

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕಡೋಳ ಗ್ರಾಮದ ಬಳಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಸಾವನ್ನಪ್ಪಿದ ಘಟನೆ ಜರುಗಿದೆ.

ಕಾರಿನಲ್ಲಿದ್ದ ಅವರ ಪತ್ನಿಗೆ ಗಾಯಗಳಾಗಿದ್ದು, ಇಬ್ಬರು ಪುತ್ರರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.

ಬಸವ ಕಲ್ಯಾಣ ನೋಡಲು ಕುಟುಂಬ ಸದಸ್ಯರೊಂದಿಗೆ ತೆರಳಿ, ವಾಪಸ್ ಬರುವಾಗ ಲಿಂಗರಾಜ್ ಶಾಸ್ತ್ರಿ ಅವರ ಪುತ್ರ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ.
ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿ ಹೊಡೆಯುತ್ತಿದ್ದಂತೆಯೇ ಏರ್‌ ಬ್ಯಾಗ್‌ಗಳು ತೆರೆದುಕೊಂಡಿದೆಯಾದರೂ ಗಂಭೀರ ಗಾಯಗಳಾದ ಪರಿಣಾಮ ಶಾಸ್ತ್ರಿ (50) ಸಾವನ್ನಪ್ಪಿದರು.

ಅಪಘಾತ ಸಂಭವಿಸಿದ ಸ್ಥಳದಲ್ಲಿ ಜೇನು ಹುಳು ದಾಳಿಯೂ ನಡೆದಿದೆ. ಹೀಗಾಗಿ ಶಾಸ್ತ್ರಿ ಅವರ ಪತ್ನಿಗೆ ವಿಪರೀತವಾಗಿ ಗಾಯಗೊಂಡಿದ್ದಾರೆ, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article
Leave a comment