ಸಂತೋಷ್ ಮೃತದೇಹವನ್ನು ಬೆಳಗಾವಿಯಲ್ಲಿರುವ ಅವರ ಮನೆ ಮುಂದೆ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಳಕ್ಕೆ ಆಗಮಿಸಿದ್ದರು.
ಈ ವೇಳೆ ಶಾಸಕಿ ಮಾತನಾಡಿ, ಸಂತೋಷ್ ಆತ್ಮಹತ್ಯೆಗೆ ನ್ಯಾಯ ಸಿಗಬೇಕು. ಜೊತೆಗೆ ಪರಿಹಾರ ಸಿಗಬೇಕು. ಅಲ್ಲಿಯವರೆಗೂ ಸಂತೋಷ್ ಅವರ ಮೃತದೇಹವನ್ನು ಕದಲಿಸುವುದು ಬೇಡ ಎಂದು ಹೇಳಿದ್ದಾರೆ.
ಶಾಸಕಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಂತೋಷ್ ಸಂಬಂಧಿಗಳು ಅಂತ್ಯಕ್ರಿಯೆ ಮಾಡೋಣ. ಸಂತೋಷ್ ಮೃತದೇಹ ಇಟ್ಟು ಪ್ರತಿಭಟನೆ ಮಾಡುವುದು ಬೇಡ ಎಂದಿದ್ದರು.
ಆ ಬಳಿಕ ಸಂತೋಷ್ ಪಾಟೀಲ್ ಸಂಬಂಧೀಕರ ಮಧ್ಯೆಯೇ ಕೈಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದಿದೆ. ಕೂಡಲೇ ಅಲ್ಲಿದ್ದ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಶಾಂತ ಪಡಿಸಿದರು.
ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮನೆಯಿಂದ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಸಂತೋಷ್ ಪಾಟೀಲ್ ಅವರ ಮೃತದೇಹ ರವಾನೆ ಆಗಿದೆ. ಗ್ರಾಮದ ಹೊರವಲಯದ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಗ್ರಾಮದ ಪ್ರಮುಖ ರಸ್ತೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಲಿದ್ದು, ಲಿಂಗಾಯತ ವಿಧಿ ವಿಧಾನದಂತೆ ನೆರವೇರಲಿರುವ ಸಂತೋಷ ಪಾಟೀಲ್ ಅಂತ್ಯಕ್ರಿಯೆ ನಡೆಯಲಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment