ದ್ರೌಪದಿ ಮುರ್ಮು ಶ್ರೇಷ್ಠ ರಾಷ್ಟ್ರಪತಿಯಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ‘ಶ್ರೀಮತಿ ದ್ರೌಪದಿ ಮುರ್ಮು ಅವರು ಸಮಾಜ ಸೇವೆಗೆ ಮತ್ತು ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ ಮತ್ತು ಅತ್ಯುತ್ತಮ ಗವರ್ನಟೋರಿಯಲ್ ಅಧಿಕಾರವನ್ನು ಹೊಂದಿದ್ದರು. ಅವರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಂತೆಯೇ ಲಕ್ಷಾಂತರ ಜನರು, ವಿಶೇಷವಾಗಿ ಬಡತನವನ್ನು ಅನುಭವಿಸಿದ ಮತ್ತು ಕಷ್ಟಗಳನ್ನು ಎದುರಿಸಿದವರು.. ಅವರ ಜೀವನದಿಂದ ಹೆಚ್ಚಿನ ಶಕ್ತಿಯನ್ನು ಪಡೆಯುತ್ತಾರೆ. ದ್ರೌಪದಿ ಮುರ್ಮು ಅವರು ನೀತಿ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಸಹಾನುಭೂತಿಯ ಸ್ವಭಾವವು ನಮ್ಮ ದೇಶಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
20 ಜೂನ್ 1958 ರಂದು ಒಡಿಶಾ ದಲ್ಲಿ ಜನನ, ಬಿ.ಎ ಪದವೀಧರರಾದ ದ್ರೌಪದಿ, ರಾಯ್ ರಂಗಪುರ್ ದಲ್ಲಿರುವ ಶ್ರೀಅರಬಿಂದೋ ಕಾಲೇಜಿನಲ್ಲಿ ಗೌರವಾನ್ವಿತ ಸಹಾಯಕ ಪ್ರಾಧ್ಯಾಪಕಿಯಾಗಿದ್ದರು. ಒಡಿಶಾದ ನೀರಾವರಿ ಇಲಾಖೆಯಲ್ಲಿ ಜ್ಯೂನಿಯರ್ ಸಹಾಯಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದರು. 1997ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಪತಿ ಶ್ಯಾಮ್ ಚರಣ ಮುರ್ಮು ದಿವಂಗತರಾಗಿದ್ದು, ಇಬ್ಬರು ಪುತ್ರರು ದ್ರೌಪದಿ ಅವರನ್ನು ಅಗಲಿದ್ದಾರೆ. ಪುತ್ರಿ ಇತಿಶ್ರೀ ಮುರ್ಮು ಮಾತ್ರ ಜೊತೆಗಿದ್ದಾರೆ. 2017ರಲ್ಲಿ ದ್ರೌಪದಿ ವೈಯಕ್ತಿಕ 9. 5 ಲಕ್ಷ ರು ಆಸ್ತಿ ಘೋಷಿಸಿಕೊಂಡಿದ್ದರು.
ಒಡಿಶಾ ಮೂಲದ ದ್ರೌಪದಿ ಮುರ್ಮು ತಂದೆ ಬಿರಂಚಿ ನಾರಾಯಣ್ ಟುಡು. ದ್ರೌಪದಿ ಒಡಿಶಾದ ಮಾಜಿ ಸಚಿವೆ ಜಾರ್ಖಂಡ್ ರಾಜ್ಯದ ಮಾಜಿ ರಾಜ್ಯಪಾಲರಾಗಿದ್ದವರು. ಕೇಂದ್ರ ಸಚಿವೆಯಾಗಿದ್ದವರು. ಉತ್ತಮ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಪ್ರತಿಭಾ ಪಾಟೀಲ್ ನಂತರ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಲಿದ್ದಾರೆ. ಬುಡಕಟ್ಟು ಜನಾಂಗದ ಮಹಿಳೆ, ಒಡಿಶಾ/ಜಾರ್ಖಂಡ್ ಮೂಲದಿಂದ ಉನ್ನತ ಹುದ್ದೆಗೆ ಅಲಂಕರಿಸುವ ಮೊದಲ ಮಹಿಳೆ ಎನಿಸಿಕೊಳ್ಳಲಿದ್ದಾರೆ.
ದ್ರೌಪದಿ ಮುರ್ಮು ತಮ್ಮ ನಿಸ್ವಾರ್ಥ ಜನಸೇವೆಯಿಂದಾಗಿ ಉತ್ತಮ ಶಾಸಕಿ ಎಂಬ ಪ್ರಶಸ್ತಿಯನ್ನೂ ಪಡೆದಿದ್ದರು.1997 ರಲ್ಲಿ ಅವರನ್ನು ಕೌನ್ಸಿಲರ್ ಆಗಿ ಆರಿಸಲಾಯಿತು. ನಂತರ ರಾಷ್ಟ್ರೀಯ ಸಲಹಾ ಸಮಿತಿಯ ಉಪಾಧ್ಯಕ್ಷರಾಗಿಯೂ ನೇಮಕಗೊಂಡರು. ಒಡಿಶಾದ ಶಾಸಕಿಯಾಗಿ ಆಯ್ಕೆಯಾಗಿದ್ದಲ್ಲದೆ, ಸಚಿವರಾಗಿಯೂ ಕರ್ತವ್ಯ ನಿಭಾಯಿಸಿದ್ದರು. 2002 ರಿಂದ 2009ರವರೆಗೆ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯರಾಗಿ ನೇಮಕಗೊಂಡರು.2007 ರಲ್ಲಿ ನೀಲಕಂಠ ಎಂಬ ಪ್ರಶಸ್ತಿಯನ್ನೂ ಪಡೆದರು.
16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ 15 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮನಾಥ್ ಕೋವಿಂದ್ ಜುಲೈ 25, 2017 ರಂದು ಅಧಿಕಾರ ವಹಿಸಿಕೊಂಡಿದ್ದು, ಅವರ ಅವಧಿಯು ಜುಲೈ 24, 2022 ರಂದು ಕೊನೆಗೊಳ್ಳುತ್ತದೆ. NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ವಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅಧಿಕೃತ ಅಭ್ಯರ್ಥಿಗಳಾಗಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment