Karnataka

ದೇವೀರಮ್ಮನ ದೇವಾಲಯಕ್ಕೆ ಡ್ರೆಸ್ ಕೋಡ್ :  ದೇವಸ್ಥಾನ ಆಡಳಿತ ಮಂಡಳಿ ಸೂಚನೆ

ದೇವೀರಮ್ಮನ ದೇವಸ್ಥಾನಕ್ಕೆ Dress Code ಆದೇಶ ಜಾರಿ ಮಾಡಲಾಗಿದೆ. ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಸೂಚನೆ ನೀಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಈ ಸೂಚನೆಯನ್ನು ಹೊರಡಿಸಿದೆ.

ಚಿಕ್ಕಮಗಳೂರು ತಾಲೂಕಿನ ಬಿಂಡಿಗ ದೇವೀರಮ್ಮನ ದೇವಾಲಯದಲ್ಲಿ ಡ್ರೆಸ್​ ಕೊಡ್​ ಇದ್ದವರು ಮಾತ್ರ ಆಗಮಿಸಬಹುದು ಎಂದು ಹೇಳಲಾಗಿದೆ.

Dress Code ಕುರಿತು ಮಾಹಿತಿ ಇಲ್ಲಿದೆ ಗಮನಿಸಿ. ಈ ರೀತಿ ಉಡುಪು ಧರಿಸುವಂತಿಲ್ಲ

ಸ್ಕರ್ಟ್, ಮಿಡಿ, ಸ್ಲೀವ್ ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಎಂಬ ಆದೇಶವನ್ನು ಹೊರಡಿಸಲಾಗಿದೆ. ಸಾಂಪ್ರದಾಯಿಕ ಉಡುಗೆಯನ್ನು ಮಾತ್ರ ತೊಟ್ಟು ಆಗಮಿಸಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ ಗೂ ನಿಷೇಧ : ದೀಪಾವಳಿ ವೇಳೆ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ, ಆ ಸಂದರ್ಭದಲ್ಲಿ ಹೆಚ್ಚಿನ ಜನರು ಫೋಟೋ ತೆಗೆಯುತ್ತಾರೆ ಅಥವಾ ಮಾತನಾಡುತ್ತಾರೆ. ಇದರಿಂದಾಗಿ ಎಲ್ಲರಿಗೂ ತೊಂದರೆಯಾಗುತ್ತಿತ್ತು. ಅದರ ಸಲುವಾಗಿ ಈಗ ಮೊಬೈಲ್​ ಅನ್ನೂ ಸಹ ನಿಷೇಧ ಮಾಡಲಾಗಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ದೇವೀರಮ್ಮನ ಬೆಟ್ಟ ಹತ್ತುತ್ತಾರೆ.

ಮಕ್ಕಳಿಂದ-ವೃದ್ಧರವರೆಗೂ ಬೆಟ್ಟ ಹತ್ತಿ ಬೆಟ್ಟದ ತಾಯಿಗೆ ಕೈಮುಗಿಯುತ್ತಾರೆ. ಯುವಕ-ಯುವತಿಯರು ಬರ್ತಾರೆ, ಅವರಲ್ಲಿ ಪ್ರೇಮಿಗಳು ಇರ್ತಾರೆ ಇದರಿಂದಾಗಿ ಈಗ ಹೊಸ ನಿಯಮವನ್ನು ಎಲ್ಲರೂ ಪಾಲಿಸುವಂತೆ ಸೂಚನೆ ನೀಡಲಾಗಿದೆ.

ಯಾರೇ ಬಂದರೂ ಸಾಂಪ್ರಾದಾಯಿಕ ಉಡುಗೆಯಲ್ಲೇ ಬರಬೇಕೆಂದು ದೇವಾಲಯ ಸೂಚನೆ ಹೊರಡಿಸಿದೆ. ಸೀರೆ ಲಂಗಾ ದಾವಣಿ ಅಥವಾ ಉದ್ದ ತೋಳಿನ ಚೂಡಿದಾರ್​ ವಿತ್ ಶಾಲ್​ ಅಲ್ಲಿಗೆ ಹೋಗಬಹುದು. ಹೊರತಾಗಿ ಬೇರೆ ರೀತಿಯ ಬಟ್ಟೆ ಧರಿಸುವಂತಿಲ್ಲ.ಗೃಹ ಜ್ಯೋತಿಯ ಉಚಿತ ವಿದ್ಯುತ್‌ ಸೌಲಭ್ಯ ಪಡೆಯಲು ಮೈಸೂರಿನ 7.13 ಲಕ್ಷ ಗ್ರಾಹಕರು ಸಿದ್ದ

ದೇವಾಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್, ರೀಲ್ಸ್ ಗೆ ಅವಕಾಶವಿಲ್ಲ ಎಂದು ಸಂದೇಶ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲ ಈ ನಿಯಮಗಳಿಂದ ಕೂಡಿದೆ.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024