ನಾಡಿನ ಮನೆ ಮನಗಳಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ಎಲ್ಲೆಡೆ ಸಂಭ್ರಮ ಸಡಗರ ಮನೆ ಮಾಡಿದೆ. ದಸರಾ ಪ್ರಮುಖ ಆಕರ್ಷಣೆಯಾದ ಮೈಸೂರಿನ ಐತಿಹಾಸಿಕ ಜಂಬೂ ಸವಾರಿ ಆರಂಭಕ್ಕೆ ಚಾಮುಂಡೇಶ್ವರಿ ಮಾತೆಗೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಲಾಯತು. ಕೇವಲ 20 ನಿಮಿಷದಲ್ಲಿ ಜಂಬೂ ಸವಾರಿಯೂ ಕೂಡ ಅಂತ್ಯ ಕಂಡಿತು.

ಅದಕ್ಕೂ ಮುನ್ನ ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೋಡಿ ನಂದಿ ಧ್ವಜಕ್ಕೆ ಮೀನ ಲಗ್ನದಲ್ಲಿ ಪೂಜೆ ಸಲ್ಲಿಸಿದರು.
ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಎರಡನೇ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಅಭಿಮನ್ಯು ಆನೆಗೆ ಶೃಂಗಾರ ಮಾಡಲಾಗಿದೆ. ನಮ್ದಾ , ಗಾದಿ, ಚಾಪು, ಆಭರಣಗಳನ್ನು ಧರಿಸಿ ಕ್ಯಾಪ್ಟನ್ ಅಭಿಮನ್ಯು ಗಾಂಭೀರ್ಯದಿಂದ ರೆಡಿಯಾಗಿದ್ದಾನೆ.
ಕೋಡಿ ಸೋಮೆಶ್ವರನಿಗೆ ಸಮಸ್ಕರಿಸಿ ಮುನ್ನಡೆದ ಅಭಿಮನ್ಯು ರಾಜ ಗಾಂಭೀರ್ಯದಲ್ಲಿ ಅರಮನೆಯತ್ತ ಹೆಜ್ಜೆ ಹಾಕಿದ್ದಾನೆ.
ಜಗದ್ವಿಖ್ಯಾತ ಜಂಬೂ ಸವಾರಿಯಲ್ಲಿ ಅಭಿಮನ್ಯುವಿಗೆ ಆನೆಗಳಾದ ಕಾವೇರಿ ಮತ್ತು ಚೈತ್ರ ಸಾಥ್ ನೀಡಿವೆ
ಇನ್ನು ನಿಶಾನೆ ಆನೆಯಾಗಿ ಧನಂಜಯ, ನೌಪತ್ ಆನೆಯಾಗಿ ಗೋಪಾಲಸ್ವಾಮಿ, ಸಾಲು ಆನೆಯಾಗಿ ಅಶ್ವತ್ಥಾಮ ಭಾಗಿಯಾಗಿದ್ದಾವೆ.
ಇನ್ನು ಈ ಬಾರಿ ಕೇವಲ 6 ಆನೆಗಳು ಮಾತ್ರ ಮೆರವಣಿಗೆಯಲ್ಲಿ ಭಾಗಿಯಾಗಿವೆ. ಈ ಸಲದ ದಸರಾಗೆ ವಿಕ್ರಮ ಆನೆಗೆ ಮೆರವಣಿಗೆಯಿಂದ ಕೊಕ್ ನೀಡಲಾಗಿದೆ. ಮದ ಇರುವ ಹಿನ್ನೆಲೆ ವಿಕ್ರಮ ಮೆರವಣಿಗೆಯಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಜೊತೆಗೆ ಲಕ್ಷ್ಮೀ ಆನೆಗೂ ಕೊಕ್ ನೀಡಲಾಗಿದೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ