ನಾಡಿನ ಮನೆ ಮನಗಳಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ಎಲ್ಲೆಡೆ ಸಂಭ್ರಮ ಸಡಗರ ಮನೆ ಮಾಡಿದೆ. ದಸರಾ ಪ್ರಮುಖ ಆಕರ್ಷಣೆಯಾದ ಮೈಸೂರಿನ ಐತಿಹಾಸಿಕ ಜಂಬೂ ಸವಾರಿ ಆರಂಭಕ್ಕೆ ಚಾಮುಂಡೇಶ್ವರಿ ಮಾತೆಗೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಲಾಯತು. ಕೇವಲ 20 ನಿಮಿಷದಲ್ಲಿ ಜಂಬೂ ಸವಾರಿಯೂ ಕೂಡ ಅಂತ್ಯ ಕಂಡಿತು.
ಅದಕ್ಕೂ ಮುನ್ನ ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೋಡಿ ನಂದಿ ಧ್ವಜಕ್ಕೆ ಮೀನ ಲಗ್ನದಲ್ಲಿ ಪೂಜೆ ಸಲ್ಲಿಸಿದರು.
ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಎರಡನೇ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಅಭಿಮನ್ಯು ಆನೆಗೆ ಶೃಂಗಾರ ಮಾಡಲಾಗಿದೆ. ನಮ್ದಾ , ಗಾದಿ, ಚಾಪು, ಆಭರಣಗಳನ್ನು ಧರಿಸಿ ಕ್ಯಾಪ್ಟನ್ ಅಭಿಮನ್ಯು ಗಾಂಭೀರ್ಯದಿಂದ ರೆಡಿಯಾಗಿದ್ದಾನೆ.
ಕೋಡಿ ಸೋಮೆಶ್ವರನಿಗೆ ಸಮಸ್ಕರಿಸಿ ಮುನ್ನಡೆದ ಅಭಿಮನ್ಯು ರಾಜ ಗಾಂಭೀರ್ಯದಲ್ಲಿ ಅರಮನೆಯತ್ತ ಹೆಜ್ಜೆ ಹಾಕಿದ್ದಾನೆ.
ಜಗದ್ವಿಖ್ಯಾತ ಜಂಬೂ ಸವಾರಿಯಲ್ಲಿ ಅಭಿಮನ್ಯುವಿಗೆ ಆನೆಗಳಾದ ಕಾವೇರಿ ಮತ್ತು ಚೈತ್ರ ಸಾಥ್ ನೀಡಿವೆ
ಇನ್ನು ನಿಶಾನೆ ಆನೆಯಾಗಿ ಧನಂಜಯ, ನೌಪತ್ ಆನೆಯಾಗಿ ಗೋಪಾಲಸ್ವಾಮಿ, ಸಾಲು ಆನೆಯಾಗಿ ಅಶ್ವತ್ಥಾಮ ಭಾಗಿಯಾಗಿದ್ದಾವೆ.
ಇನ್ನು ಈ ಬಾರಿ ಕೇವಲ 6 ಆನೆಗಳು ಮಾತ್ರ ಮೆರವಣಿಗೆಯಲ್ಲಿ ಭಾಗಿಯಾಗಿವೆ. ಈ ಸಲದ ದಸರಾಗೆ ವಿಕ್ರಮ ಆನೆಗೆ ಮೆರವಣಿಗೆಯಿಂದ ಕೊಕ್ ನೀಡಲಾಗಿದೆ. ಮದ ಇರುವ ಹಿನ್ನೆಲೆ ವಿಕ್ರಮ ಮೆರವಣಿಗೆಯಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಜೊತೆಗೆ ಲಕ್ಷ್ಮೀ ಆನೆಗೂ ಕೊಕ್ ನೀಡಲಾಗಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment