ಡೆಹ್ರಾಡೂನ್ ಸುಪ್ರಸಿದ್ಧ ಚಾರ್ ಧಾಮ್ ಯಾತ್ರೆಗೆ ಅಕ್ಷಯ ತೃತೀಯ ದಿನವಾಗಿರುವ ಮಂಗಳವಾರ ಚಾಲನೆ ನೀಡಲಾಗಿದೆ.
ಯಾತ್ರೆಯ ಆರಂಭಿಕ ಹಂತವಾಗಿ, ಉತ್ತರ ಕಾಶಿ ಜಿಲ್ಲೆಯಲ್ಲಿರುವ ಗಂಗೋತ್ರಿ ಹಾಗೂ ಯಮುನೋತ್ರಿ ದೇಗುಲಗಳನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ.
ಗಂಗೋತ್ರಿ ದೇಗುಲವನ್ನು ಬೆಳಗ್ಗೆ 11.15ಕ್ಕೆ ಹಾಗೂ ಯಮುನೋತ್ರಿ ದೇಗುಲದ ಪ್ರವೇಶ ದ್ವಾರವನ್ನು 12.15ಕ್ಕೆ ತೆರೆಯಲಾಗಿದೆ.
ಚಾರ್ಧಾಮ್ ಯಾತ್ರೆಯ ಇನ್ನೆರಡು ಯಾತ್ರಾ ಸ್ಥಳಗಳಾದ ಕೇದಾರನಾಥ ದೇಗುಲವನ್ನು ಮೇ 6, ಬದ್ರಿನಾಥ್ ದೇಗುಲವನ್ನು ಮೇ 8ರಂದು ತೆರೆಯಲಾಗುತ್ತದೆ.
ದೇವಸ್ಥಾನ ತೆರೆಯಲ್ಪಟ್ಟಾಗ ಗಂಗಾ ಮತ್ತು ಯಮುನಾ ದೇಗುಲಗಳಲ್ಲಿ ಇಬ್ಬರೂ ದೇವತೆಗಳ ಪಲ್ಲಕ್ಕಿ ಉತ್ಸವ ಆರಂಭವಾಗುತ್ತದೆ..
ದೇವತೆಗಳ ಮೂರ್ತಿಗಳನ್ನು ಅಲಂಕೃತಗೊಂಡಿದ್ದ ಪಲ್ಲಕ್ಕಿಗಳಲ್ಲಿಟ್ಟು ಮೆರವಣಿಗೆಯ ಜೊತೆ ಧಾರ್ಮಿಕ ಸೇವೆಯಲ್ಲಿ ಪಾಲ್ಗೊಂಡಿದ್ದ ಪುರೋಹಿತರು ಸ್ತೋತ್ರಗಳನ್ನು ಪಠಿಸುತ್ತಾರೆ.
2019ರ ನಂತರದಲ್ಲಿ ಇದೇ ಮೊದಲ ಬಾರಿಗೆ ಚಾರ್ಧಾಮ್ ಯಾತ್ರೆಯನ್ನು ಆರಂಭಿಸಲಾಗಿದೆ ದೇಗುಲಗಳಿಗೆ ಭೇಟಿ ನೀಡುವ ಭಕ್ತರ ದಿನಂಪ್ರತಿ ಸಂಖ್ಯೆಗೆ ಮಿತಿ ಹೇರಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು