ಆರ್ ಟಿ ಓ ಇನ್ಸ್ಪೆಕ್ಟರ್ ಇಲ್ಲದೇ ಚಾಲಕವೊಬ್ಬ ರಸ್ತೆ ಬದಿಯಲ್ಲಿ ಜೀಪ್ ನಿಲ್ಲಿಸಿಕೊಂಡು ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುತ್ತಿದ್ದ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಮಳವಳ್ಳಿಯಲ್ಲಿ ಜರುಗಿದೆ.
ಪಟ್ಟಣದ ಹೊರವಲಯದ ಶಾಂತಿ ಶಿಕ್ಷಣ ಸಂಸ್ಥೆಯ ಬಳಿ ಮಂಡ್ಯ ಆರ್ ಟಿ ಓ ಇಲಾಖೆಯ ಜೀಪ್ ಚಾಲಕ ತನ್ನ ಮೇಲಾಧಿಕಾರಿ ಇಲ್ಲದೇ ರಸ್ತೆ ಬದಿಯಲ್ಲಿ ಜೀಪ್ ನಿಲ್ಲಿಸಿಕೊಂಡು ವಾಹನಗಳನ್ನು ಅಡ್ಡಗಟ್ಟಿದ್ದಾನೆ.
ಇದೇ ವೇಳೆ ಸಾರಿಗೆ ಇನ್ಸ್ ಪೇಕ್ಟರ್ ಪ್ರಕರಣವೊಂದರ ಸಂಬಂಧ ಪಟ್ಟಣದ ನ್ಯಾಯಾಲಯಕ್ಕೆ ಬಂದಿದ್ದರು. ಅವರಿಗೆ ಹಣ ಕೊಡಬೇಕು ಎಂದು ವಸೂಲಿ ಮಾಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಅನುಮಾನಗೊಂಡ ಸ್ಥಳೀಯರು ಜೀಪ್ ಚಾಲಕನ ಲಾರಿ ಚಾಲಕನ ಬಳಿ ಆರು ಸಾವಿರ ಹಣ ಕೇಳುತ್ತಿದ್ದ ವೇಳೆ ವಿಡೀಯೋ ಮಾಡಿದ್ದಾರೆ.
ಸಾರ್ವಜನಿಕರು ಚಾಲಕನ ಸುತ್ತುವರೆದು ಪ್ರಶ್ನೆ ಮಾಡಲು ಮುಂದಾಗುತ್ತಿದಂತೆಯೇ ತಬ್ಬಿಬ್ಬಾದ ಚಾಲಕ ನಮ್ಮ ಸಾಹೇಬ್ರು ಕೋರ್ಟ್ ಗೆ ಹೋಗಿದ್ದಾರೆ. ಬರ್ತಾರೆ ಅದಕ್ಕೆ ನಾವು ಮತ್ತು ನಮ್ಮವರು ತಪಾಸಣೆ ಮಾಡುತ್ತಿದ್ದೇವೆ ಎಂದು ಕಾರಣ ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಈ ಬಗ್ಗೆ ಸ್ಥಳೀಯರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಆರ್ ಟಿ ಓ ಚಾಲಕ ತನ್ನ ಜೀಪ್ ತೆಗೆದುಕೊಂಡು ಹೋಗಿದ್ದಾನೆ. ಎನ್ನಲಾದ ವಿಡೀಯೋ ಸಖತ್ ವೈರಲ್ ಆಗಿದೆ.
ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ