crime

ಕುಡಿದ ಮತ್ತಿನಲ್ಲಿ ಮಗಳ ಎದುರೇ ಪತ್ನಿಯನ್ನು ಕೊಂದ ಪತಿ

ಕುಡಿದ ಮತ್ತಿನಲ್ಲಿ ಮಗಳ ಕಣ್ಣೆದುರೇ ತಾಯಿಯನ್ನು ತಂದೆ ಕೊಲೆ ಮಾಡಿರುವ ದಾರುಣ ಘಟನೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಜರುಗಿದೆ.

ಮೃತ ಮಹಿಳೆಯನ್ನು ಅರಳಕುಪ್ಪೆ ಗ್ರಾಮದ ಶೋಭಾ (43) ಗುರುತಿಸಲಾಗಿದೆ. ಮನೋಹರ್ (48) ಎಂಬಾತ ಪತ್ನಿಯನ್ನೇ ಕೊಂದ ಪಾಪಿ ಪತಿಯಾಗಿದ್ದಾನೆ.ಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ – ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

23 ವರ್ಷಗಳ ಹಿಂದೆ ಒಂದೇ ಗ್ರಾಮದ ಶೋಭಾ ಹಾಗೂ ಮನೋಹರ್ ಪ್ರೀತಿಸಿ ಪೋಷಕರ ವಿರೋಧದ ನಡುವೆ ಮದುವೆ ಆಗಿದ್ದರು. ಮನೋಹರ್ ಕೆಲಸಕ್ಕೆ ಹೋಗದೆ ಉಂಡಾಡಿ ಗುಂಡನ ರೀತಿ ಓಡಾಡಿಕೊಂಡಿದ್ದ. ಇಬ್ಬರು ಮಕ್ಕಳಿದ್ದರೂ, ಬೇಜವಾಬ್ದಾರಿಯಿಂದ ಕಂಠಪೂರ್ತಿ ಕುಡಿದು ಪ್ರತಿನಿತ್ಯ ಪತ್ನಿ ಜೊತೆ ಮನೋಹರ್ ಗಲಾಟೆ‌ ಮಾಡುತ್ತಿದ್ದ.

ಮಂಗಳವಾರವೂ ಬೈಕ್ ಸಾಲದ ವಿಚಾರಕ್ಕೆ ಮನೆಯಲ್ಲಿ ಕಿರಿಕ್ ಆಗಿದೆ. ಮಗನಿಗೆ ಸಾಲದ ಕಂತಿನಲ್ಲಿ ಶೋಭಾ ಬೈಕ್ ಕೊಡಿಸಿದ್ದರು.

ಕಳೆದ 3 ತಿಂಗಳಿನಿಂದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಮನೋಹರ್‌ಗೆ ಕರೆ ಮಾಡಿ ಕಂತು ಕಟ್ಟುವಂತೆ ಫೈನಾನ್ಸ್ ಕಂಪನಿಯವರು ಕೇಳಿದ್ದರು. ಅಷ್ಟೇ ಅಲ್ಲದೆ ಮನೆ ಬಳಿಗೆ ಬಂದು ಹಣ ಕಟ್ಟುವಂತೆ ಖಾಸಗಿ ಫೈನಾನ್ಸ್ ಸಿಬ್ಬಂದಿ ಒತ್ತಡ ಹಾಕಿದ್ದರು. ಈ ವಿಚಾರಕ್ಕೆ ಕುಪಿತಗೊಂಡ ಮನೋಹರ್‌ನಿಂದ ಜಗಳ ಪ್ರಾರಂಭವಾಗಿದ್ದು, ಕುಡಿದ ಮತ್ತಿನಲ್ಲಿ ಪತ್ನಿಗೆ ಮನಬಂದಂತೆ ಬೈದು ಗಲಾಟೆ ಮಾಡಿದ್ದ. ಪರಸ್ಪರ ಬೈದಾಟದಿಂದ ಪತಿ, ಪತ್ನಿಯರ ಜಗಳ ತಾರಕಕ್ಕೆ ಏರಿದೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮನೋಹರ್ ಪತ್ನಿ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ಕುಡುಗೋಲಿನಿಂದ ಮಗಳ ಕಣ್ಣೆದುರೇ ಶೋಭಾಳ ಮೇಲೆ ಮನೋಹರ್ ಹಲ್ಲೆ ನಡೆಸಿದ್ದಾನೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಶೋಭಾ ಸಹಾಯಕ್ಕೆ ಸ್ಥಳೀಯರು ಬಂದಿಲ್ಲ, ಮಗಳು ಅನುಷಾ ಕೇಳಿಕೊಂಡರೂ ಯಾರ ಸಹಾಯವೂ ಸಿಗಲಿಲ್ಲ. ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಕೂಡ ಬಾರದ ಕಾರಣ ಶೋಭಾ ಸಾವನ್ನಪ್ಪಿದ್ದಾಳೆ. ಪತ್ನಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಮನೋಹರ್‌ನನ್ನು ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ತಂದೆಗೆ ಕಠಿಣ ಶಿಕ್ಷೆ ನೀಡಿ, ಸಾಯೋವರೆಗೂ ಜೈಲಲ್ಲೇ ಕೊಳೆಯುವ ರೀತಿ ಮಾಡಬೇಕು ಎಂದು ಪುತ್ರಿ ಅನುಷಾ ಮನವಿ ಮಾಡಿದ್ದಾಳೆ. ಸದ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024