Categories: ಕ್ರೀಡೆ

ದುಬೈನಲ್ಲಿ ಇಂದಿನಿಂದ ಆರ್‍ಸಿಬಿ ತರಬೇತಿ ಶಿಬಿರ

ದುಬೈ : ಐಪಿಎಲ್ ಹದಿಮೂರನೇ ಆವೃತ್ತಿಗಾಗಿ ಯುಎಇಗೆ ಬಂದಿಳಿದ ನಂತರ ಮೊದಲ 6 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ವಿರಾಟ್ ಕೊಹ್ಲಿ ನೇತೃತ್ವದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಇಂದಿನಿಂದ 3 ವಾರಗಳ ಕಾಲ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಆಟಗಾರರು ಇನ್ನು ಜೈವಿಕ-ಸುರಕ್ಷಾ ವಾತಾವರಣದೊಳಗೆ ಕಠಿಣ ಅಭ್ಯಾಸ ಪ್ರಾರಂಭಿಸಲಿದ್ದಾರೆ.
ಫಿಟ್ನೆಸ್ ಮತ್ತು ತರಬೇತಿಯ ಭಿನ್ನ ಹಂತಗಳನ್ನು ದಾಟಿಬಂದ ಆಟಗಾರರು ಕಳೆದ ಕೆಲ ತಿಂಗಳಿನಿಂ ವಿಭಿನ್ನವಾದ ವಾತಾವರಣದಲ್ಲಿ ದಿನಗಳನ್ನು ಕಳೆದಿದ್ದು, ಹೀಗಾಗಿ ಎಲ್ಲ ಆಟಗಾರರಿಗೆ ಅವರಿಗೆ ತಕ್ಕಂತೆ ಅಭ್ಯಾಸಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು. ಅಲ್ಲದೇ ಆಟಗಾರರ ದೈಹಿಕ, ಮಾನಸಿಕ, ಭಾವನಾತ್ಮಕ ವಿಚಾರಗಳ ಬಗ್ಗೆ ತಂಡದ ತರಬೇತಿ ಸಿಬ್ಬಂದಿ ಗಮನಹರಿಸಲಿದ್ದಾರೆ. ಈ ಮೂಲಕ ಅವರನ್ನು ಅತ್ಯುತ್ತಮ ಕ್ರಿಕೆಟ್ ಆಡಲು ಸಜ್ಜುಗೊಳಿಸಲಾಗುವುದು ಎಂದು ಆರ್‍ಸಿಬಿ ತಂಡದ ಕ್ರಿಕೆಟ್ ನಿರ್ದೇಶಕ ಮೈಕ್ ಹೆಸ್ಸನ್ ತಿಳಿಸಿದ್ದಾರೆ.
ಆರು ದಿನಗಳ ಕ್ವಾರಂಟೈನ್‍ನಲ್ಲಿ ಎಲ್ಲರ ವರದಿಯೂ ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ದುಬೈನಲ್ಲಿ ಬುಧವಾರದಿಂದಲೇ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಅಭ್ಯಾಸ ಆರಂಭಿಸುವ ಜೊತೆಗೆ ಟೂರ್ನಿಯ ಜೈವಿಕ-ಸುರಕ್ಷಾ ವಾತಾವರಣದೊಳಗೆ ಪ್ರವೇಶ ಪಡೆದಿದ್ದಾರೆ. ಕಿಂಗ್ಸ್ ಇಲೆವೆನ್ ಆಟಗಾರರಾಗಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ಮಾಸ್ಕ್ ಧರಿಸಿ ಅಭ್ಯಾಸಕ್ಕೆ ತೆರಳುತ್ತಿರುವ ಚಿತ್ರವನ್ನು ಟ್ವಿಟರ್‍ನಲ್ಲಿ ಪ್ರಕಟಿಸಿದ್ದಾರೆ.
ಅಲ್ಲದೇ, ಕೋಲ್ಕತ ನೈಟ್‍ರೈಡರ್ಸ್ ಅಬುಧಾಬಿಯಲ್ಲಿ ಅಭ್ಯಾಸ ಆರಂಭಿಸಿದೆ ಎನ್ನಲಾಗಿದ್ದು, ಆರ್‍ಸಿಬಿ ಜತೆಗೆ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‍ಕಿಂಗ್ಸ್ ತಂಡಗಳ ಕ್ವಾರಂಟೈನ್ ಅವಧಿ ಬುಧವಾರ ಪೂರ್ಣಗೊಂಡಿದ್ದು, ಸಹ ಗುರುವಾರದಿಂದ ಅಭ್ಯಾಸ ಆರಂಭಿಸಲಿವೆ.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024