ಪರೀಕ್ಷೆ ಹಿನ್ನೆಲೆಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಜಿಲ್ಲೆಯ ಅಂಗನವಾಡಿ, ಶಾಲೆ, ಹಾಗೂ ಪಿಯು ಕಾಲೇಜಿಗೆ ಮಂಗಳವಾರವೂ ರಜೆ ಘೋಷಿಸಿ ಕೊಡಗು ಡಿಸಿ ವೆಂಕಟ್ ರಾಜ್ ಆದೇಶಿಸಿದ್ದಾರೆ.
ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಭಾರೀ ಅವಾಂತರಗಳು ಸೃಷ್ಟಿಯಾಗಿದೆ. ಕೊಡಗಿನ ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಾವೇರಿ ಹಾಗೂ ಉಪನದಿಗಳು ಮೈದುಂಬಿ ಹರಿಯುತ್ತಿವೆ.
ಭಾಗಮಂಡಲದ ತ್ರಿವೇಣಿ ಸಂಗಮದ ನೀರು ಭಂಗಢೇಶ್ವರ ದೇವಾಲಯ ಆವರಣದವರೆಗೂ ಹರಿದಿದೆ
ಭಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದ್ದು, 4 ಅಡಿಯಷ್ಟು ನೀರು ತುಂಬಿಕೊಂಡಿದೆ.
ಭಾರೀ ಗಾತ್ರದ ವಾಹನಗಳಷ್ಟೇ ಪ್ರದೇಶಗಳಲ್ಲಿ ಸಂಚಾರಕ್ಕೆ ಸಾಧ್ಯವಾಗುತ್ತಿದ್ದು, ಸಣ್ಣ ಪುಟ್ಟ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮುಜಾಗ್ರತಾ ಕ್ರಮವಾಗಿ ಒಂದು ತಿಂಗಳಿಂದ ಭಾಗಮಂಡಲದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.ಚಾಮುಂಡಿ ತಾಯಿ ದರ್ಶನ ಪಡೆದ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್
ಕಳೆದ ರಾತ್ರಿಯಿಂದ ಮಳೆ ಸ್ವಲ್ಪಮಟ್ಟಿಗೆ ತಗ್ಗಿದೆ ಹಾರಂಗಿ ಜಲಾಶಯಕ್ಕೆ ಒಳಹರಿವು ಇಳಿಕೆಯಾಗಿದೆ. ಜಲಾಶಯಕ್ಕೆ ಒಳಹರಿವು 16,120 ಕ್ಯೂಸೆಕ್ ನೀರು ಇದೆ ಕಾವೇರಿ ನದಿಗೆ 18,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕಳೆದ ರಾತ್ರಿ ಡ್ಯಾಂ ಅಧಿಕಾರಿಗಳು 36,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆ. ಸದ್ಯದ ಮಟ್ಟಿಗೆ ಮಳೆ ಆರ್ಭಟ ಕಡಿಮೆಯಾಗಿದೆ.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment