ರಾಜ್ಯದಲ್ಲಿ ದಿನಕ್ಕೊಂದು ಕುತೂಹಲದ ಪುಟವನ್ನು ತೆರೆದಿಡುತ್ತಿರುವ ಡ್ರಗ್ಸ್ ಪ್ರಕರಣದಲ್ಲಿ ಈಗ ಪೋಲೀಸರು ಕಾಂಗ್ರೆಸ್ನ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಅವರನ್ನು ಡ್ರಗ್ ಪೆಡ್ಲರ್ಗಳಿಗೆ ಆಶ್ರಯ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮುಂಚೆ ಪೋಲೀಸರು ಸುಜಯ್ ಎಂಬುವವರನ್ನು ಬಂಧಿಸಿದ್ದರು. ವಿಚಾರಣೆಯಲ್ಲಿ ಸುಜಯ್ ನೀಡಿದ ಮಾಹಿತಿಯ ಮೇರೆಗೆ ಸದಾಶಿವ ನಗರದ ರಿಸೆಟ್ ಜಿಮ್ ಕಛೇರಿಯ ಮೇಲೆ ಪೋಲೀಸರು ದಾಳಿ ನಡೆಸಿದಾಗ ದರ್ಶನ್ ಲಮಾಣಿ ಸೇರಿದಂತೆ, ಒನ್ ಆ್ಯಪ್ ವಿಟಮಿನ್ ಕಂಪನಿಯ ಸಿಇಓ ಹೇಮಂತ್ ಹಾಗೂ 7 ಜನರನ್ನು ಪೋಲೀಸರು ಬಂಧಿಸಿದ್ದಾರೆ.
ಡ್ರಗ್ ಪೆಡ್ಲರ್ಗಳಿಗೆ ದರ್ಶನ್ ಹಾಗೂ ಸಂಗಡಿಗರು ಗೋವಾದಲ್ಲಿ ಆಶ್ರಯ ನೀಡಿದ ಆರೋಪವಲ್ಲದೇ, ಡಾರ್ಕ್ ನೆಟ್ ಮೂಲಕ ಡ್ರಗ್ಸ್ನ ದಂಧೆ ನಡೆಸಿದ ಆರೋಪವೂ ಅವರ ಮೇಲಿದೆ.
ಆರೋಪಿ ದರ್ಶನ್ ತಂದೆ ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಜವಳಿ ಖಾತೆಯ ಸಚಿವರಾಗಿದ್ದರು. ಬಂಧಿತರೆಲ್ಲರೂ ಸದಾಶಿವ ನಗರದ ನಿವಾಸಿಗಳಾಗಿದ್ದಾರೆ. ದಾಳಿಯಲ್ಲಿ 500 ಗ್ರಾಂ ಹೈಡ್ರೋ ಗಾಂಜಾವನ್ನು ಪೋಲೀಸರು ವಶ ಮಾಡಿಸಿಕೊಂಡಿದ್ದಾರೆ.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment