February 22, 2026

Newsnap Kannada

The World at your finger tips!

helicopter collides with eagle

ಡಿಕೆ ಶಿವಕುಮಾರ್‌ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ – ಪ್ರಾಣಾಪಾಯದಿಂದ ಪಾರು

Spread the love

ರಾಜ್ಯ ಚುನಾವಣಾ ಪ್ರಚಾರಕ್ಕೆ ಮುಳಬಾಗಿಲಿಗೆ ತೆರಳುತ್ತಿದ್ದ KPCC ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗ್ಗೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿಕೆ ಶಿವಕುಮಾರ್‌ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್‌ ಏರಿದ್ದರು. ಜಕ್ಕೂರಿನಿಂದ ಹೆಲಿಕಾಪ್ಟರ್‌ ಟೇಕಾಫ್‌ ಆಗಿ ಹೊಸಕೋಟೆ ಬಳಿ ಹೋಗುತ್ತಿದ್ದಾಗ ಹದ್ದೊಂದು ಡಿಕ್ಕಿ ಹೊಡೆದಿದೆ. ಕಾಂಗ್ರೆಸ್‍ನಿಂದ ಪ್ರಣಾಳಿಕೆ ಬಿಡುಗಡೆ – ಎನ್‍ಇಪಿ ಹಾಗೂ ಭಜರಂಗದಳ ನಿಷೇಧ !

ಹದ್ದು ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್‌ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಕೂಡಲೇ ಎಚ್ಚೆತ್ತ ಪೈಲಟ್‌ ಎಚ್‌ಎಎಲ್‌ನಲ್ಲಿ ಹೆಲಿಕಾಪ್ಟರ್‌ ಅನ್ನು ತುರ್ತು ಭೂಸ್ಪರ್ಷ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚುನಾವಣಾ ತರಬೇತಿಗೆ ತೆರಳ್ತಿದ್ದ ಸರ್ಕಾರಿ ಬಸ್ ಪಲ್ಟಿ : ಸಿಬ್ಬಂದಿಗಳಿಗೆ ಗಾಯ

ಹೆಲಿಕಾಪ್ಟರ್‌ನಲ್ಲಿ 4 ಮಂದಿ ಪ್ರಯಣಿಸುತ್ತಿದ್ದರು. ಹೆಲಿಕಾಪ್ಟರ್‌ನಿಂದ ಇಳಿದ ಡಿಕೆ ಶಿವಕುಮಾರ್‌ ಕಾರು ಮೂಲಕ ಮುಳಬಾಗಿಲು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.

error: Content is protected !!