February 17, 2026

Newsnap Kannada

The World at your finger tips!

WhatsApp Image 2021 11 26 at 1.14.00 PM 1

ಮೈಸೂರು ಹಾಗೂ ಕೊಡಗು ಗಡಿ ಭಾಗದಲ್ಲಿ ಭೂಕಂಪನದ ಅನುಭವ

Spread the love

ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಕಂಪಿಸಿದ ಅನುಭವವಾಗಿದ್ದು , ಕೊಡಗು – ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ಬೆಳಿಗ್ಗೆ 6:30ರ ವೇಳೆಗೆ 2 ರಿಂದ 3 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಪಿರಿಯಾಪಟ್ಟಣ ತಾಲೂಕಿನ ಅಡುಗೂರು ಮತ್ತು ಕಣಗಾಲು ಸುತ್ತಮುತ್ತ ಭಾಗದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

ಭೂಮಿ ಕಂಪಿಸುವ ವೇಳೆ ಗುಂಡಿಗಳಿರುವ ರಸ್ತೆಯಲ್ಲಿ ಲಾರಿ ಚಲಿಸುವಾಗ ಉಂಟಾಗುವ ಶಬ್ಧದಂತೆ ಸದ್ದು ಉಂಟಾಗಿದ್ದು ,ಕೆಲವೆಡೆ ಡ್ಯಾಂನಲ್ಲಿ ನೀರು ಬಿಟ್ಟಾಗ ಆಗುವ ಶಬ್ಧ ಕೇಳಿದ ಅನುಭವವಾಗಿದೆ.ಚನ್ನಪಟ್ಟಣ ಉಪ ಚುನಾವಣೆ ಕಣಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರವೇಶ

ಭೂಮಿಯಿಂದ ಬಂದ ವಿಚಿತ್ರ ಶಬ್ದಕ್ಕೆ ಜನರು ಆತಂಕಕ್ಕೊಳಗಾಗಿದ್ದಾರೆ.

error: Content is protected !!