ಹಾಸನ ಜಿಲ್ಲೆಯ ಹಲವೆಡೆ ಗುರುವಾರ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಅರಕಲಗೂಡು ತಾಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ.
ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮದ ಸುತ್ತಮುತ್ತಲೂ ಬೆಳಗ್ಗೆ 4.52 ನಿಮಿಷದಲ್ಲಿ ಭೂಮಿ ನಡುಗಿದ ಅನುಭವ ಆಗಿದೆ. ಭೂಕಂಪಕ್ಕೆ ನಿದ್ದೆಯಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮನೆಗಳಲ್ಲಿ ಬಿರುಕು ಬಿಟ್ಟಿದೆ.
ಗುರುವಾರ ಬೆಳಗಿನ ಜಾವ 4.38 ರ ಆಸು ಪಾಸು ಭೂಮಿ ಕಂಪಿಸಿದೆ. ಕಂಪಿಸಿದ ಅನುಭವ ಆಗುತ್ತಿದ್ದಂತೆ ಹಾಸಿಗೆಯಿಂದ ಎದ್ದು ಓಡಿ ಬಂದಿರುವ ಬಗ್ಗೆ ಗ್ರಾಮಸ್ಥರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧಿಕಾರಿಗಳು ಲಘು ಭೂಕಂಪನವನ್ನು ದೃಢಪಡಿಸಿದ್ದಾರೆ.
ಈ ನಡುವೆ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1800 ಕ್ಕೂ ಅಧಿಕ ಸಂಖ್ಯೆಯ ಜನ ಸಾವನ್ನಪ್ಪಿದ ಬೆನ್ನಲ್ಲೇ ಹಾಸನದಲ್ಲಿ ಭೂಮಿ ಕಂಪಿಸಿದ್ದು ಜನರಿಗೆ ಆತಂಕ ಮೂಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ