ಸಿಎಂ‌ ಯಡಿಯೂರಪ್ಪ ಸೇರಿ ಕುಟುಂಬದ 6 ಸದಸ್ಯರ ವಿರುದ್ದ ಇಡಿ ದೂರು

Team Newsnap
0 Min Read

ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ಸಲ್ಲಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ದೂರು ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಮೊಮ್ಮಗ ಶಶಿಧರ್ ಮರಡಿ ಸೇರಿದಂತೆ ಒಟ್ಟು 6 ಜನರ ವಿರುದ್ಧ ದೂರು ನೀಡಲಾಗಿದೆ.‌

ಅಬ್ರಾಹಂ, ಹಣ ವರ್ಗಾವಣೆ ಬಗ್ಗೆ ಡೆವೆಲಪರ್ ಚಂದ್ರಕಾಂತ್ ರಾಮಲಿಂಗಂ ಜೊತೆ ಶಶಿಧರ್ ಮರಡಿ ನಡೆಸಿರುವ ವಾಟ್ಸಾಪ್ ಸಂಭಾಷಣೆ ಸಮೇತ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Share This Article
Leave a comment