ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿಗೆ ಸಹೋದರಿಯ ಮಗನನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
ಚನ್ನಿ ಸೋದರಳಿಯ ಭುಪೇಂದರ್ ಸಿಂಗ್ ಹನಿಯನ್ನ ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಇಂದು ಬಂಧಿಸಿದ್ದಾರೆ.
ಚುನಾವಣೆ ಎದುರಿಸುತ್ತಿರುವ ಹೊತ್ತಿನಲ್ಲಿ ಇಡಿ ಅಧಿಕಾರಿಗಳ ಈ ದಾಳಿ ಸಿಎಂ ಚನ್ನಿಗೆ ರಾಜಕೀಯವಾಗಿ ದೊಡ್ಡ ಹೊಡೆತ ಬೀಳಲಿದೆ
ಪಿಎಂಎಲ್ಎ (Prevention of Money Laundering Act) ಅಡಿಯಲ್ಲಿ ಇಡಿ ಅಧಿಕಾರಿಗಳು ಬಂಧಿಸಿ, ತನಿಖೆಯನ್ನು ಆರಂಭಿಸಿದ್ದಾರೆ.
ಈಗಾಗಲೇ ಬಂಧನಕ್ಕೆ ಒಳಪಡಿಸಿರುವ ತನಿಖಾಧಿಕಾರಿಗಳು ಬರೋಬ್ಬರಿ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ಲೂಧಿಯಾನದಲ್ಲಿರುವ ಹನಿ ನಿವಾಸದ ಮೇಲೆ ಇಡಿ ದಾಳಿ ಮಾಡಿತ್ತು.