crime

ಮಾಜಿ ಸಚಿವ ನಾಗೇಂದ್ರ, ದದ್ದಲ್ ನಿವಾಸಗಳ ಮೇಲೆ ED ದಾಳಿ : ಬಂಧನ ಸಾಧ್ಯತೆ

  • ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಆರೋಪ ಕೇಸ್
  • 10ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿರುವ ಇಡಿ ಅಧಿಕಾರಿಗಳು
  • ನಕಲಿ ಕಂಪನಿ, ನಕಲಿ ಅಕೌಂಟ್ ಮೂಲಕ ಹಣ ಟ್ರಾನ್ಸ್​ಫರ್ ಆರೋಪ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದ ಸಂಬಂಧ ಬೆಂಗಳೂರು, ರಾಯಚೂರು ಸೇರಿದಂತೆ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ದಾಳಿ ಮಾಡಿದ್ದಾರೆ.

ಪ್ರಕರಣದ ಎಲ್ಲಾ ಆರೋಪಿಗಳ ಮನೆ ಮೇಲೆ ಬುಧವಾರ ಬೆಳಗ್ಗೆ 6 ಗಂಟೆಯಿಂದ ದಾಳಿ ಆರಂಭಿಸಿದ್ದಾರೆ.

ಬೆಂಗಳೂರು, ಬಳ್ಳಾರಿ, ರಾಯಚೂರು ಮತ್ತು ಹಾವೇರಿಯಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್, ಪದ್ಮನಾಭ, ಪರಶುರಾಮ ಮತ್ತು ಬ್ಯಾಂಕ್ ಅಧಿಕಾರಿಗಳ‌ ಮನೆ ಮೇಲೆ ದಾಳಿ ಮಾಡಿದ್ದಾರೆ.

187 ಕೋಟಿಯ ಬಹುದೊಡ್ಡ ಹಗರಣದಲ್ಲಿ 94 ಕೋಟಿ ಹೈದ್ರಾಬಾದ್ ಗೆ ಟ್ರಾನ್ಸಫರ್ ಆಗಿದೆ. ನಕಲಿ ಕಂಪನಿಗಳಿಗೆ, ನಕಲಿ ಅಕೌಂಟ್ ಮೂಲಕ ಟ್ರಾನ್ಸಫರ್ ಮಾಡಲಾಗಿದೆ ಎನ್ನಲಾಗಿದೆ.

ಲೆಕ್ಕವಿಲ್ಲದೇ ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ

ರಾಯಚೂರು ನಗರದ ಆರ್ ಆರ್ ಕಾಲೋನಿಯಲ್ಲಿರುವ ಬಸನಗೌಡ ದದ್ದಲ್ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐವರು ಅಧಿಕಾರಿಗಳ ತಂಡದಿಂದ ಮನೆ ಮೇಲೆ‌ ದಾಳಿ ನಡೆದಿದೆ.

ಈ ವೇಳೆ ಅಧಿಕಾರಿಗಳು ಮನೆ ಸದಸ್ಯರ ಮೊಬೈಲ್ ಸೀಜ್ ಮಾಡಿದ್ದಾರೆ. ಒಬ್ಬರು ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳಿಂದ ರೇಡ್ ನಡೆದಿದೆ.

ಇದನ್ನು ಓದಿ – ರಾಮನಗರ ಪ್ರತಿಭಟನೆ :ನಿಖಿಲ್ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕುಮುಕಿ

ಮಾಜಿ ಸಚಿವ ನಾಗೇಂದ್ರರ ಬೆಂಗಳೂರಿನ ಡಾಲಸ್ ಕಾಲೋನಿ ಅಪಾರ್ಟ್ ಮೆಂಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Team Newsnap
Leave a Comment

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024