ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಭಾನುವಾರ ಬೆಳಗ್ಗೆ ದಾಳಿ ಮಾಡಿದ್ದಾರೆ.
1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದರು.ಇದನ್ನು ಓದಿ -ಪಿಎಸ್ಐ ಪರೀಕ್ಷೆ ಹಗರಣ- 3 ತಿಂಗಳಿಂದ ಎಸ್ಕೇಪ್ಆಗಿದ್ದ ಮತ್ತೊಬ್ಬ PSI ಬಂಧನ: ಮಂಬೈನಲ್ಲಿ ಸಿಐಡಿ ಬಲೆಗೆ
ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಹಿಂದಿನ ಸಮನ್ಸ್ ತಪ್ಪಿಸಿದ ನಂತರ ಸಂಜಯ್ ರಾವತ್ ಅವರನ್ನು ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು.
ಇಂದು ಬೆಳಗ್ಗೆ ಮುಂಬೈನ ಬಂಡಪ್ನಲ್ಲಿರುವ ರಾವತ್ ಅವರ ಮನೆಗೆ ತನಿಖಾ ಸಂಸ್ಥೆ ತಂಡವು ಸಿಆರ್ಪಿಎಫ್ ಅಧಿಕಾರಿಗಳ ಜೊತೆ ದಾಳಿ ಮಾಡಿದೆ. ಸದ್ಯ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಈ ಸಮನ್ಸ್ ನಿರಾಕರಿಸಿ ಇದು ರಾಜಕೀಯ ದ್ವೇಷದ ಕಾರಣದಿಂದ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ.
ಈ ನಡುವೆ ಜುಲೈ 1 ರಂದು ರಾವತ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಏಪ್ರಿಲ್ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಮಾಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ