Main News

ದೇಶದಲ್ಲಿ‌ ನಡೆಯಬೇಕಿರುವ ಚುಣಾವಣೆಗಳಿಗೆ ಮುಹೂರ್ತ ಫಿಕ್ಸ್

ರಾಜ್ಯದ ರಾಜರಾಜೇಶ್ವರಿ ನಗರ, ಸಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ
ಚುನಾವಣಾ ಆಯೋಗ ದಿನಾಂಕ ಫಿಕ್ಸ್ ಮಾಡಿದೆ.ನವೆಂಬರ್ 3 ರಂದು ಮತದಾನಕ್ಕೆ ಮುಹೂರ್ತ ನಿಗದಿಯಾಗಿದೆ‌‌. ನವೆಂಬರ್ 10 ರಂದುಫಲಿತಾಂಶ ಪ್ರಕಟವಾಗಲಿದೆ.ಕರ್ನಾಟಕದ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮುಂದಿನ ತಿಂಗಳ 28 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 1ರಂದು ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಚುಣಾವಣಾ ಆಯೋಗ ಹೇಳಿದೆ.ಈಗಾಗಲೇ ವಿಧಾನಸಭೆಯಿಂದ ತೆರವಾಗಿರುವ ಮಸ್ಕಿ ಮತ್ತು ಬಸವ ಕಲ್ಯಾಣ ಕ್ಷೇತ್ರಗಳಿಗೂ ಸಹ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಲಿವೆ.

ಆಗ್ನೆಯ ಪದವೀಧರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಆಯೋಗ ಚುನಾವಣೆ ನಡೆಸಲಿದೆ. ಈ ನಾಲ್ಕು ಕ್ಷೇತ್ರಗಳಲ್ಲಿ ಆರ್.ಚೌಡರೆಡ್ಡಿ, ಎಸ್.ವಿ. ಸಂಕನೂರ, ಶರಣಪ್ಪ ಮಟ್ಟೂರ ಹಾಗೂ ಪುಟ್ಟಣ್ಣ ಸದಸ್ಯರಾಗಿದ್ದರು.

ಇತರ ರಾಜ್ಯ ಗಳ ಉಪ ಚುನಾವಣೆ:

ಬಿಹಾರದ ಒಂದು ಲೋಕಸಭಾ ಕ್ಷೇತ್ರ, ಮಣಿಪುರದ 2 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 7 ರಂದು ಉಪ ಚುನಾವಣೆ ನಿಗದಿಯಾಗಿದೆ.ರಾಜ್ಯದ 2 ಕ್ಷೇತ್ರಗಳು ಸೇರಿದಂತೆ ದೇಶದ ಒಟ್ಟು 54 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 9 ರಂದು ಅಧಿಸೂಚನೆ ಹೊರಡಿಸಲಾಗುತ್ತಿದೆ. ನಾಮಪತ್ರ ಸಲ್ಲಿಸಲು 16 ಕೊನೆಯ ದಿನಾಂಕವಾಗಿದೆ. ಮರು ದಿನ ಉಮೇದುವಾರಿಕೆ ಪರಿಶೀಲನೆ ನಡೆಯಲಿದೆ. 19ರಂದು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ.

ಬಿಹಾರದ ಒಂದು ಲೋಕಸಭೆ, ಮಣಿಪುರದ ಎರಡುವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 13 ರಂದು ಅಧಿಸೂಚನೆ ಹೊರಡಿಸಲಾಗುತ್ತಿದೆ. ಉಮೇದುವಾರಿಕೆ ಸಲ್ಲಿಸಲು 20ಕೊನೆಯ ದಿನಾಂಕ. ಅಕ್ಟೋಬರ್ 21 ರಂದು ಪರಿಶೀಲನೆ ದಿನಾಂಕವಾದರೆ, ಅಕ್ಟೋಬರ್ 23 ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ನವೆಂಬರ್ 7 ರಂದು ಮತದಾನ ದಿನ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು 28, ಗುಜರಾತ್ 8,ಜಾರ್ಖಂಡ್ 2, ಚತ್ತೀಸ್‌ಗಢ, ಹರಿಯಾಣ, ತೆಲಂಗಾಣದಿಂದ
ತಲಾ 1, ಮಣಿಪುರ, ನಾಗಾಲ್ಯಾಂಡ್, ಒಡಿಶಾದಿಂದತಲಾ 2, ಮತ್ತು ಉತ್ತರ ಪ್ರದೇಶದ 7 ವಿಧಾನಸಭಾ
ಕ್ಷೇತ್ರಗಳಲ್ಲೂ ಉಪ ಚುನಾವಣೆ ನಡೆಯಲಿದೆ.

ರಾಜರಾಜೇಶ್ವರಿ ನಗರ,ಮಸ್ಕಿ ಕ್ಷೇತ್ರಗಳ ಶಾಸಕರರಾಜೀನಾಮೆಯಿಂದ ತೆರವಾಗಿದ್ದರೂ ನ್ಯಾಯಾಲಯದಲ್ಲಿ ಪ್ರಕರಣಗಳ ಇತ್ಯರ್ಥವಾಗಿರಲಿಲ್ಲ. ಹಾಗಾಗಿ ಉಪಚುನಾವಣೆ ನಡೆಸಿರಲಿಲ್ಲ. ಈಗ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಮಾಡಿದ್ದರೂ ಮಸ್ಕಿ ಹಾಗೂಬಸವ ಕಲ್ಯಾಣ ಕ್ಷೇತ್ರಗಳಿಗೆ ಮುಂದಿನ ದಿನಗಳಲ್ಲಿ ಚುನಾವಣೆ ಘೋಷಣೆ ಮಾಡಬಹುದು.ಕೋವಿಡ್‌ನಿಂದ ಶಿರಾ ಮತ್ತು ಬಸವ ಕಲ್ಯಾಣ ಶಾಸಕಸತ್ಯನಾರಾಯಣ್ ಮೃತಪಟ್ಟಿದ್ದಾರೆ. ಇನ್ನೂ ಎರಡು ವಿಧಾನ ಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸುವ ಅನಿವಾರ್ಯತೆ ಚುಣಾವಣಾ ಆಯೋಗಕ್ಕಿದೆ.

ಕೊರೋನಾ ನಿಮಿತ್ತ ಸಕಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಚುನಾವಣೆ ಜರುಗಿಸಲು ಆಯೋಗವು ಅಗತ್ಯ ಮಾರ್ಗಸೂಚಿಗಳನ್ನು ನೀಡಿದೆ. ಜನವರಿ 2020ರ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳುವುದು ಮತ್ತು ವಿವಿಪ್ಯಾಟ್ ಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಹಾಗೂ ಚುನಾವಣೆ ನಡೆಸಲು ಅಗತ್ಯವಾದಷ್ಟು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಶೇಖರಿಸಿಕೊಳ್ಳಲು ಆಯೋಗ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024