ರಾಜ್ಯಸಭಾದ 13 ಸ್ಥಾನಗಳಿಗೆ ಏಪ್ರಿಲ್ 31ರಂದು ಚುನಾವಣೆ ನಿಗದಿಪಡಿಸಲಾಗಿದೆ
ಭಾರತದ ಚುನಾವಣಾ ಆಯೋಗ ಈ ಘೋಷಣೆ ಮಾಡಿ ಒಟ್ಟು 6 ರಾಜ್ಯಗಳಿಂದ 13 ಸ್ಥಾನಗಳಿಗೆ ಅಂದು ಚುನಾವಣೆ ನಡೆಯಲಿದೆ ಎಂದು ಹೇಳಿದೆ.
ಪಂಜಾಬ್ನಲ್ಲಿ 5, ಕೇರಳದಲ್ಲಿ 3, ಅಸ್ಸಾಂನಲ್ಲಿ 2 ಹಾಗೂ ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ತ್ರಿಪುರ ರಾಜ್ಯಗಳಲ್ಲಿ ತಲಾ ಒಂದು ಸ್ಥಾನ ಖಾಲಿ ಉಳಿದಿವೆ.
ರಾಜ್ಯಸಭಾ ಸದಸ್ಯರಾದ ಸುಖ್ದೇವ್ ಸಿಂಗ್, ಪ್ರತಾಪ್ ಸಿಂಗ್ ಬಜ್ವಾ, ಸ್ವೈತ್ ಮಲಿಕ್, ನರೇಶ್ ಗುಜ್ರಾಲ್, ಶ್ಯಾಮ್ಶೇಖರ್ ಸಿಂಗ್ ಡಲ್ಲೋ, ಎ.ಕೆ.ಆಂಟೊಣಿ, ಎಂ.ವಿ.ಶ್ರೇಯಮ್ಸ್ ಕುಮಾರ್, ಕೆ.ಸೋಮಪ್ರಸಾದ್, ಕೆ.ರಾಣೇ ನರೇಶ್, ರಿಪುನ್ ಬೋರಾ, ಆನಂದ್ ಶರ್ಮಾ, ಕೆ.ಜಿ.ಕೆನ್ಯೆ, ಸ್ಮಿತ್ ಝರ್ನ ದಾಸ್ ಅವರ ಅವಧಿ ಏಪ್ರಿಲ್ ತಿಂಗಳಲ್ಲಿ ಮುಗಿಯಲಿದೆ.
ರಾಜ್ಯಸಭೆಯ ಸ್ಥಾನಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 776 ಸಂಸದರು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 4,120 ಶಾಸಕರು ರಾಷ್ಟ್ರಪತಿ ಆಯ್ಕೆಗೆ ಮತದಾನ ಮಾಡುತ್ತಾರೆ.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ