ತಮಿಳುನಾಡಿನ ತಂಜಾವೂರಿನಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ರಥಕ್ಕೆ ವಿದ್ಯುತ್ ತಂತಿ ತಗುಲಿ 11 ಮಂದಿ ಸಾವನ್ನಪ್ಪಿದ್ದಾರೆ.
ಈ ದುರ್ಘಟನೆಯಲ್ಲಿ 14 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಥೋತ್ಸವದ ವೇಳೆ ರಥ ಎಳೆಯುತ್ತಿದ್ದಾಗ ಮೇಲ್ಭಾಗಕ್ಕೆ ವಿದ್ಯುತ್ ತಂತಿ ತಗುಲಿ ಈ ದುರಂತ ಸಂಭವಿಸಿದೆ. ಆಗ ರಥ ಎಳೆಯುತ್ತಿದ್ದ 11 ಮಂದಿ ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಮಿಳುನಾಡಿನ ಸರ್ಕಾರ ತಲಾ 5 ಲಕ್ಷ ರು ಪರಿಹಾರ ಘೋಷಣೆ ಮಾಡಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಹೈವೋಲ್ಟೇಜ್ ತಂತಿ ರಥಕ್ಕೆ ತಗುಲಿದೆ ಆಗ ರಥ ಎಳೆಯುತ್ತಿದ್ದ 11 ಮಂದಿ ಸಾವನ್ನಪ್ಪಿದ್ದಾರೆ . ರಥ ಕೂಡ ಬೆಂಕಿಯಿಂದ ಭಸ್ಮವಾಗಿದೆ ಎಂದು ಗೊತ್ತಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ಗಳನ್ನು ನಿರೀಕ್ಷಿಸಲಾಗುತ್ತಿದೆ.