Karnataka

ಇಂದಿನಿಂದಲೇ ವಿದ್ಯುತ್ ದರ ಏರಿಕೆ : ಮತ್ತೆ ರಾಜ್ಯದ ಜನರಿಗೆ ಬೆಲೆ ಏರಿಕೆ ಶಾಕ್

ರಾಜ್ಯದಲ್ಲಿ ಬೆಸ್ಕಾಂ ಸೇರಿ 5 ಎಸ್ಕಾಂಗಳ ದರವನ್ನು ಏರಿಕೆ ಮಾಡಲಾಗಿದೆ. ಇಂದಿನಿಂದ ಅನ್ವಯವಾಗುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಇಂಧನ ಹೊಂದಾಣಿಕೆ ಶುಲ್ಕವನ್ನು ಹೆಚ್ಚಳ ಮಾಡಿ ಆದೇಶಿಸಿದೆ.

ಈ ವರ್ಷದಲ್ಲಿ ಮೂರು ಬಾರಿ ವಿದ್ಯುತ್ ದರ ಹೆಚ್ಚಳವಾಗಿದೆ.ಇದನ್ನು ಓದಿ –ಬಿಗ್ ಬಾಸ್ ಮಂಜು ಪಾವಗಡ ಸಹೋದರನಿಂದ ಯುವತಿಗೆ ಬ್ಲಾಕ್ ಮೇಲ್- ಜನರಿಂದ ಧರ್ಮದೇಟು


2013ರ ನಿಯಮದ ಪ್ರಕಾರ ನಿರ್ಧಿಷ್ಟಪಡಿಸಿದ ಸ್ಥಾವರಗಳಿಂದ ವಿದ್ಯುತ್ ಖರೀದಿ ಮಾಡುವಾಗ ಕಲ್ಲಿದ್ದಲು ವೆಚ್ಚ ಹೆಚ್ಚಳ ಅಥವಾ ಇಳಿಕೆ ಕಾಣುವಾಗ ಮೂರು ತಿಂಗಳಿಗೊಮ್ಮೆ ಎಸ್ಕಾಂಗಳ ಬೇಡಿಕೆಯಂತೆ ದರ ಏರಿಕೆ-ಇಳಿಕೆ ಮಾಡಬಹುದು.

ಈ ಬಾರಿ ಆಗಿರುವ ದರ ಏರಿಕೆ ತೀರಾ ಹೆಚ್ಚು ಅನ್ನುವ ಅಭಿಪ್ರಾಯ ಕೇಳಿಬಂದಿದೆ. ಅಲ್ಲದೇ ಎಸ್ಕಾಂಗಳು ಖರೀದಿ ಹೆಚ್ಚಳ ನೆಪ, ನಷ್ಟದ ನೆಪವನ್ನು ಒಡ್ಡುತ್ತಿದೆ. ಅಸಲಿಗೆ ಬೇರೆ ಮಾರ್ಗದಿಂದ ನಷ್ಟವನ್ನು ಸರಿತೂಗಿಸಬಹುದು. ಆದರೆ ಅದರ ಹತ್ತಿರ ಗಮನ ಹರಿಸದೇ ಕೇವಲ ದರ ಏರಿಕೆ ಮಾತ್ರ ಮಾಡಲಾಗುತ್ತಿದೆ ಎಂಬ ಟೀಕೆ ಬಂದಿದೆ.

ಪ್ರತಿ ಯೂನಿಟ್‌ಗೆ ಎಲ್ಲಿ ಎಷ್ಟು ಹೆಚ್ಚಳ?

  • ಬೆಸ್ಕಾಂ – 43 ಪೈಸೆ
  • ಸೆಸ್ಕಾಂ – 35 ಪೈಸೆ
  • ಹೆಸ್ಕಾಂ – 35 ಪೈಸೆ
  • ಜೆಸ್ಕಾಂ – 35 ಪೈಸೆ
  • ಮೆಸ್ಕಾಂ – 24 ಪೈಸೆ
    ಎಷ್ಟು ಏರಿಕೆ?

ಬೆಸ್ಕಾಂ ವ್ಯಾಪ್ತಿ ಒಂದು ಮನೆಗೆ 500 ರೂ. ಬರುತ್ತಿದ್ದರೆ 40 ರೂ. ಹೆಚ್ಚಳವಾಗಲಿದೆ. 1 ಸಾವಿರ ರೂ. ವಿದ್ಯುತ್ ಬಿಲ್ ಬರುತ್ತಿದ್ದರೆ ಇಂದಿನಿಂದ 1,080ರೂ. ಆಗಲಿದೆ.

ಇದನ್ನೂ ಎಷ್ಟು ಏರಿಕೆ?

ಬೆಸ್ಕಾಂ ವ್ಯಾಪ್ತಿ ಒಂದು ಮನೆಗೆ 500 ರೂ. ಬರುತ್ತಿದ್ದರೆ 40 ರೂ. ಹೆಚ್ಚಳವಾಗಲಿದೆ. 1 ಸಾವಿರ ರೂ. ವಿದ್ಯುತ್ ಬಿಲ್ ಬರುತ್ತಿದ್ದರೆ ಇಂದಿನಿಂದ 1,080ರೂ. ಆಗಲಿದೆ.ಮುರುಘಾ ಪೀಠಾಧಿಪತಿ ಸ್ಥಾನ ಶೂದ್ರರಿಗೆ ಬಿಟ್ಟು ಕೊಡಿ: ನಗರಸಭೆ ಮಾಜಿ ಅಧ್ಯಕ್ಷ ಕಾಂತರಾಜ್

ಎಷ್ಟು ಹೆಚ್ಚಳ?


2022 – ಏಪ್ರಿಲ್‌ನಲ್ಲಿ ಪ್ರತಿ ಯೂನಿಟ್‍ಗೆ 33 ಪೈಸೆ ಹೆಚ್ಚಳ ಮಾಡಲಾಗಿತ್ತು. ವಾರ್ಷಿಕವಾಗಿ ವಿದ್ಯುತ್ ದರ ಹೆಚ್ಚಳ ಕಾರಣ ನೀಡಲಾಗಿತ್ತು.

2022 – ಜೂನ್‌ನಲ್ಲಿ ಪ್ರತಿ ಯೂನಿಟ್‍ಗೆ 31 ಪೈಸೆ ಏರಿಕೆ ಮಾಡಲಾಗಿತ್ತು. ಇಂಧನ ಹೊಂದಾಣಿಕೆ ಶುಲ್ಕ ಎಂದು ಕಾರಣವನ್ನು ನೀಡಿತ್ತು.

ಈಗ ಇಂಧನ ಇಲಾಖೆ ನೀಡುತ್ತಿರುವ ಕಾರಣ ಏನು?


ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ. ಪ್ರತಿ 3 ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕ ಪರಿಷ್ಕರಣೆ ಮಾಡಬೇಕು. ಆದರೆ ಗ್ರಾಹಕರಿಗೆ ಹೊರೆ ಬೀಳಬಾರದು ಎಂಬ ಕಾರಣಕ್ಕೆ 6 ತಿಂಗಳಿಗೊಮ್ಮೆ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ. 2022 ಏ-ಜೂ.ವರೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 643 ಕೋಟಿ ವಿದ್ಯುತ್ ಖರೀದಿ ಹೆಚ್ಚಳವಾಗಿದೆ.

ನಷ್ಟ ತಗ್ಗಿಸಲು ಏನು ಮಾಡಬೇಕು ?

  • ವಿದ್ಯುತ್ ಸೋರಿಕೆ ತಡೆಗಟ್ಟಬೇಕು. ಜಲವಿದ್ಯುತ್, ಸೌರಶಕ್ತಿ ವಿದ್ಯುತ್, ಪವನ ಶಕ್ತಿ ಬಳಕೆ ಹೆಚ್ಚಿಸಬೇಕು.
  • ಥರ್ಮಲ್ ಪವರ್ ಪ್ಲ್ಯಾಂಟ್‍ಗೆ ಮಾತ್ರ ಇಂಧನ ಇಲಾಖೆ ಅವಲಂಬಿತವಾಗಿದ್ದು ದೀರ್ಘಕಾಲಿಕವಾಗಿ ವಿದ್ಯುತ್ ಖರೀದಿ ಒಪ್ಪಂದ ಕೈಬಿಡಬೇಕು.
  • ರಾಜ್ಯ ಸರ್ಕಾರದ ಇಲಾಖೆ, ಕೇಂದ್ರದ ಇಲಾಖೆಗಳಿಂದ 6,670 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು ಆ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಬೇಕು.
  • ಗುಣಮಟ್ಟದಲ್ಲಿ ವಿದ್ಯುತ್ ಸರಬರಾಜು, ಹೊಸ ಹೊಸ ತಂತ್ರಜ್ಞಾನ ಬಳಕೆ ಮಾಡಬೇಕು.
Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024