ಚಿಕ್ಕಮಂಗಳೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶ : ಮೂವರ ಸಾವು, 6 ಮಂದಿ ಗಂಭೀರ

Team Newsnap
0 Min Read

ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್​ ತಗುಲಿ ಮೂವರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಟ್ರ್ಯಾಕ್ಟರ್​ನಲ್ಲಿದ್ದ ಪೆಂಡಾಲ್​ಗೆ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಟ್ರ್ಯಾಕ್ಟರ್​​ನಲ್ಲಿದ್ದ ರಾಜು (47), ರಚನಾ (35), ಪಾರ್ವತಿ (26) ಮೃತ ಸಾವನ್ನಪ್ಪಿದ್ದಾರೆ.

ಇನ್ನು ಆರು ಜನ ಗಂಭೀರವಾಗಿ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment