February 20, 2026

Newsnap Kannada

The World at your finger tips!

JAMMU,ATTACK,soldiers

ಜಮ್ಮು – ಕಾಶ್ಮೀರದಲ್ಲಿ ಎನ್ ಕೌಂಟರ್ : ಮೈಸೂರಿನ ಸೇನಾ ಅಧಿಕಾರಿ ಸೇರಿ ನಾಲ್ವರು ಹುತಾತ್ಮರು

Spread the love

ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯಲ್ಲಿ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೈಸೂರಿನ ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಹುತಾತ್ಮರಾದ ನಾಲ್ವರಲ್ಲಿ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಮೈಸೂರಿನ ಎಂ.ವಿ.ಪ್ರಾಂಜಲ್ ಸೇರಿದ್ದಾರೆ .

ಮಂಗಳೂರು ಎಂ ಆರ್ ಪಿಎಲ್ ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಪ್ರಾಂಜಲ್, ದೆಹಲಿ ಪಬ್ಲಿಕ್ ಸ್ಕೂಲ್, MRPL ನ ಹಳೆಯ ವಿದ್ಯಾರ್ಥಿಯಾಗಿದ್ದರು .ಮಂಡ್ಯದ ಮೈಶುಗರ್ ನಲ್ಲಿ ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

ಭಯೋತ್ಪಾದಕರ ಬಗ್ಗೆ ನಿರ್ದಿಷ್ಟ ಮಾಹಿತಿ ಆಧರಿಸಿ ನವೆಂಬರ್ 19 ರಂದು ಕಲಾಕೋಟೆ ಪ್ರದೇಶದ ಗುಲಾಬ್ಗಢ ಅರಣ್ಯದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

error: Content is protected !!