January 28, 2026

Newsnap Kannada

The World at your finger tips!

WhatsApp Image 2023 07 18 at 2.57.59 PM

ಲಕ್ಷ ಎಕರೆ ಅರಣ್ಯ ಒತ್ತುವರಿ

Spread the love
  • ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದು ಲಕ್ಷ ಎಕರೆಗೂ ಹೆಚ್ಚಾಗಿ ಅರಣ್ಯ ಭೂಮಿ ಒತ್ತುವರಿ ಆಗಿದೆ. ಅರಣ್ಯ ಭೂಮಿ ಮತ್ತು ಸಂಪತ್ತು ರಕ್ಷಣೆಗೆ ಕ್ರಮಕೈಗೊಳ್ಳಬೇಕೆಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.

ಅರಣ್ಯ ಪಡೆ ನೂತನ ಮುಖ್ಯಸ್ಥರಾಗಿ ಗುರುವಾರ ಅಧಿಕಾರ ವಹಿಸಿಕೊಂಡ ನಿವೃತ್ತರಾದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರಿಗೆ ಸಚಿವರು ಸ್ಪಷ್ಟ ಸೂಚನೆ ನೀಡಿದರು.

ಅಧಿಕಾರ ವಹಿಸಿಕೊಂಡ ತರುವಾಯ ದೀಕ್ಷಿತ್ ಅವರು ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆ ಇದೆ. ರೈತರ ರಕ್ಷಣೆಗೆ ಪೂರಕ ಕ್ರಮಕ್ಕೆ ಸಹಕರಿಸಿ

ವನ್ಯಜೀವಿಗಳು ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದು ಜೀವಹಾನಿ, ಬೆಳೆಹಾನಿ ಮಾಡುವುದನ್ನು ತಡೆಯಲು ಅರಣ್ಯದೊಳಗೆ ಮೇವು ಮತ್ತು ನೀರು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಹೇಳಿದರು.

error: Content is protected !!