ಬುದ್ದಿ ಹೇಳಿದ ಪೋಲಿಸ್ ಮೇಲೆ ಹಲ್ಲೆ ಮಾಡಿದ ಪ್ರೇಮಿಗಳು ಎಸ್ಕೇಪ್

Team Newsnap
0 Min Read

ಬುದ್ಧಿ ಹೇಳಿದ ಪೋಲಿಸ್ ಮೇಲೆಯೇ ಪ್ರೇಮಿಗಳಿಬ್ಬರು ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಮೈಸೂರಿನ ಸಿದ್ದಾರ್ಥನಗರದಲ್ಲಿ ನಡೆದಿದೆ.

ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ರಾತ್ರಿ ವೇಳೆ ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳಿಗೆ ಗಸ್ತಿನಲ್ಲಿದ್ದ ಪೊಲೀಸ್​ ಒಬ್ಬರು ಪ್ರಶ್ನೆ ಮಾಡಿದ್ದರು.

ಈ ವೇಳೆ ಕುಪಿತಗೊಂಡ ಪ್ರೇಮಿಗಳು‌ ಪೊಲೀಸ್​​ ಮೇಲೆ ಹಲ್ಲೆ ನಡೆಸಿ ಎಸ್ಕೇಪ್​ ಆಗಿದ್ದಾರೆ ಎನ್ನಲಾಗಿದೆ.

ಹಲ್ಲೆಯಲ್ಲಿ ಪೊಲೀಸ್ ​​ಸಿಬ್ಬಂದಿ ಮುರುಳಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಎಸ್ಕೇಪ್ ಆಗಿರುವ ಪ್ರೇಮಿಗಳನ್ನು ಪೋಲಿಸರು ಹುಡುಕುತ್ತಿದ್ದಾರೆ.

Share This Article
Leave a comment