ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಒತ್ತಾಯಕ್ಕೆ ಮಣಿದು ಹೈಕಮಾಂಡ್ ತೀರ್ಮಾನದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಶುಕ್ರವಾರ ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನಾನಲ್ಲ ಅಪರಾಧ ಎಸಗಿಲ್ಲ ಎನ್ನುವ ಮಾತನ್ನು ಪುನರುಚ್ಚರಿಸುತ್ತಿರುವ ಈಶ್ವರಪ್ಪ ಹೈಕಮಾಂಡ್ ಸೂಚನೆಯ ಮೇರೆಗೆ ಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ, ಈಶ್ವರಪ್ಪ ಸಚಿವರಾಗಿ ಶಿವಮೊಗ್ಗದ ಶುಭಶ್ರೀ ಸಮುದಾಯ ಭವನವನ್ನು ಉದ್ಘಾಟಿಸಿದರು.
ಈ ವೇಳೆ ಈಶ್ವರಪ್ಪ ಬೆಂಬಲಿಗರು, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು. ಕೆಲವರು ಕಣ್ಣೀರು ಇಟ್ಟರು.
ಬಳಿಕ ಶಿವಮೊಗ್ಗದಿಂದ ಬೆಂಬಲಿಗರೊಂದಿಗೆ ಬೆಂಗಳೂರಿಗೆ ಹೊರಟ ಈಶ್ವರಪ್ಪ ಸಂಚರಿಸಿದ ಮಾರ್ಗ ಮಧ್ಯೆ ಅಪಾರ ಪ್ರಮಾಣದಲ್ಲಿ ಬೆಂಬಲಿಗರು ಸೇರಿದ್ದರು. ಶಿವಮೊಗ್ಗದಿಂದ ಕಡೂರು – ಅರಸೀಕೆರೆ – ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಈಶ್ವರಪ್ಪ ಜೊತೆ ರಾಜೀನಾಮೆ ಪಡೀಬೇಡಿ ಎಂದು ಸಿಎಂಗೆ ಒತ್ತಾಯ ಮಾಡಲು ಶಿವಮೊಗ್ಗದಿಂದ ನೂರಾರು ಕಾರುಗಳಲ್ಲಿ ಬೆಂಬಲಿಗರು ಆಗಮಿಸಿದ್ದರು.
ಬಳಿಕ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸಿ ಸರ್ಕಾರ ನೀಡಿದ ಕಾರನ್ನು ಬಿಟ್ಟು ಶಿವಮೊಗ್ಗಕ್ಕೆ ಹೊರಟರು.
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
- ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
- ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
More Stories
ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
ತಮ್ಮ ಹೆಸರು ರಾಜ್ಯಸಭೆಗೆ ಪ್ರಸ್ತಾಪಿಸದ ಹಿನ್ನಲೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು