ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಪ್ರಶ್ನೆ ಕೇಳಿ, ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಎಪಿಎಲ್ ಕಾರ್ಡ್ ದಾರರಿಗೆ 50% ರಿಯಾಯಿತಿ ಕೊಡಿ. ಈಗ ಇರುವ 30% ಬದಲಾಗಿ 50% ರಿಯಾಯಿತಿ ಕೊಡಬೇಕು. ಬೆಳಗಾವಿಯಲ್ಲಿ ಒಂದು ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭ ಮಾಡಬೇಕು ಎಂದು ಒತ್ತಾಯ ಮಾಡಿದರು.
ಇದಕ್ಕೆ ಶರಣ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 80% ಇರುವ ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಇದೆ. ನಮ್ಮ ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸೆಗೆ ಕಡಿಮೆ ಹಣ ಇದೆ. ಎಪಿಎಲ್ ಕಾರ್ಡ್ದಾರರಿಗೆ 50% ರಿಯಾಯಿತಿ ಕೊಡುವ ಬಗ್ಗೆ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡುತ್ತೇವೆ ಎಂದರು
ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಆಗಿದೆ. ಬೆಳಗಾವಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಮಗೆ ಜಾಗ ಸಿಗುತ್ತಿಲ್ಲ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ಮಾಡಿ ಸ್ಥಳದ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.ಇದನ್ನು ಓದಿ –ಮೈಸೂರಿನಲ್ಲಿ ವೇಶ್ಯಾವಾಟಿಕೆ: ಐವರು ಮಹಿಳೆಯರ ರಕ್ಷಣೆಯೊಂದಿಗೆ ಇಬ್ಬರ ಬಂಧನ
ನಮ್ಮ ಸರ್ಕಾರ ಬಡವರ ಪರ ಇರುವ ಸರ್ಕಾರ. ಹೀಗಾಗಿ ರಾಜ್ಯದ ಹಲವು ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ. ಕಾರವಾರ, ಮಂಡ್ಯ, ಶಿವಮೊಗ್ಗ, ಮೈಸೂರು, ತುಮಕೂರಿನಲ್ಲಿ ಹೊಸದಾಗಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು