Karnataka

ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯರಿಂದ ರೋಟರಿ ಕ್ಲಬ್ ಆಪ್ ಹಂಪೆ ಪಲ್ಸ್ ಸ್ಥಾಪನೆ

ವಿಜಯನಗರ ನ್ಯೂಸ್ : ದಿನಾಂಕ 27-11-2021 ರೋಟರಿ ಕ್ಲಬ್ ಹೊಸಪೇಟೆ ಇವರ ಆಶ್ರಯದಲ್ಲಿ ಮಹಿಳೆಯರಿಂದ ರೋಟರಿ ಕ್ಲಬ್ ಆಪ್ ಹಂಪೆ ಪಲ್ಸ್ (Rotary Club of Hampi Pearls) ಸಂಸ್ಥೆಯನ್ನು ಉದ್ಘಾಟಿಸಲಾಯಿತು.

ಹೊಸಪೇಟೆ ಸ್ಟೇಷನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಗಳನ್ನು ರೋಟರಿ ಕ್ಲಬ್ ಗವರ್ನರ್ ಮತ್ತು ಹೆಸರಾಂತ ಸಿವಿಲ್ ಗುತ್ತಿಗೆದಾರರಾದ ಶ್ರೀ ತಿರುಪತಿ ನಾಯ್ಡು ಮತ್ತು ತುಮಕೂರಿನ ರೋಟರಿ ಕ್ಲಬ್ ಮುಖ್ಯಸ್ಥರು ಮತ್ತು ಕರ್ನಾಟಕದ ಪ್ರಪ್ರಥಮ ಲೇಡಿ ಗೌರ್ನರ್ ಶ್ರೀಮತಿ ಆಶಾ ಪ್ರಸನ್ನ ಕುಮಾರ್ , ರೋಟರಿ ಕ್ಲಬ್ ಆಪ್ ಹಂಪೆ ಪರ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಕಮಲಾ ಗುಮಾಸ್ತೆ , ಕಾರ್ಯದರ್ಶಿ ಯಾಗಿ ಆಯ್ಕೆಯಾದ ಶ್ರೀಮತಿ ರಚನಾ ಏಕತಾರೆ, ಉಪಾಧ್ಯಕ್ಷ ರಾದ ಶ್ರೀಮತಿ ನಿರ್ಮಲಾ ನಾಯ್ಡ್ ಮತ್ತು ವಿಶೇಷ ಅತಿಥಿಯಾಗಿ ಆಗಮಿಸಿದ್ದ ಬೆಂಗಳೂರಿನ ಶಾಂಡಲ್ಯ ಇನ್ಸ್ಟಿಟ್ಯೂಟ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಜಿ.ಎನ್ ಶೇಷಾದ್ರಿ ಇವರುಗಳು ದೀಪವನ್ನು ಹಚ್ಚುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರೋಟರಿ ಕ್ಲಬ್ ಸದಸ್ಯರಾದ ಶ್ರೀ ಆರ್ ವಿ ಗುಮಾಸ್ತೆ, ಕಾರ್ಖಾನೆಯ ಹಿರಿಯ ಅಧಿಕಾರಿಗಳು ಮತ್ತು ಕುಟುಂಬದ ಸದಸ್ಯರು , ಕೊಪ್ಪಳ ರೋಟರಿ ಕ್ಲಬ್ ಸದಸ್ಯರಾದ ಡಾ.ಕೆ ಜಿ ಕುಲಕರ್ಣಿ ಮತ್ತು ಸದಸ್ಯರು, ಲೇಡೀಸ್ ಕ್ಲಬ್ ಸದಸ್ಯರು, ಇನರ್ ವಿಲ್ ಕ್ಲಬ್ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಸದಸ್ಯರಿಂದ ಶ್ರೀ ತಿರುಪತಿ ನಾಯ್ಡು ಇವರಿಂದ ರೋಟರಿ ಕ್ಲಬ್ ಪ್ರಮಾಣ ವಚನ ಭೋದನೆಯನ್ನು‌ ನಡೆಸಲಾಯಿತು.

ವಿಜಯನಗರ ನೂತನ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಪ್ರಾರಂಭವಾದ ನೂತನ ರೋಟರಿ ಕ್ಲಬ್ ಆಪ್ ಹಂಪೆ ಪಲ್ಸ್ ಕ್ಲಬ್ ಉದ್ಘಾಟನೆಯಾಗಿ ಸಮಾಜದ ಸಾಮಾಜಿಕ, ಆರೋಗ್ಯ,ಪರಿಸರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೈಜೋಡಿಸಿ ಸಮಾಜದ ಸಮುದಾಯದ, ಶಾಲಾ ಕಾಲೇಜುಗಳ ಸಮಾಜಿಕ ಉನ್ನತಿಯನ್ನು ಮುಖ್ಯ ಉದ್ದೇಶವನ್ನಿಟ್ಟುಕೂಂಡು ಉದ್ಘಾಟನೆ ಮಾಡಲಾಯಿತು.

ಪ್ರಥಮ ಕಾರ್ಯಕ್ರಮವಾಗಿ ಶ್ರೀಯುತ ಜಿ.ಎನ್ ಶೇಷಾದ್ರಿ ಬೆಂಗಳೂರು ಇವರಿಂದ ವ್ಯಕ್ತಿತ್ವ ವಿಕಸನ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದರು. ವೈಯಕ್ತಿಕವಾಗಿ , ಸಾಮಾಜಿಕವಾಗಿ ಮತ್ತು ಸಮೂಹದಲ್ಲಿ ಯಾವುದೇ ಆತಂಕವನ್ನು ಪಡದೆ ಗುರಿಯನ್ನು ಸಾಧಿಸಲು ಮಾಡುವ ಉಪಯುಕ್ತ ಅಂಶಗಳನ್ನು ತಿಳಿಸುವುದರ ಮೂಲಕ ಸಂತೋಷದ ಕಡೆ ಜೀವನವನ್ನು ಸಾಹಿಸುವ ಮಾರ್ಗವನ್ನು ತಮ್ಮ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಸದಸ್ಯರು ಮತ್ತು ಸಂಘ ಸಂಸ್ಥೆಗಳ ಸದಸ್ಯರುಗಳಿಗೆ ತಿಳಿಸಿದರು.

ಕಾರ್ಯಕ್ರಮ ವಂದನಾರ್ಪನೆ ಮೂಲಕ ಮುಕ್ತಾಯವಾಯಿತು.

ವರದಿ : ಮುರುಳೀಧರ್ ನಾಡಿಗೇರ್
ಹೊಸಪೇಟೆ

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024