ಚಲುವನಾರಾಯಣಸ್ವಾಮಿಗೆ ನಿತ್ಯ ಸಂಜೆ ವೇಳೆ ಸಲ್ಲುವ ಸಂಧ್ಯಾಆರತಿ ಜೊತೆಯಲ್ಲಿ ಸಲಾಂ ಆರತಿ ಹೆಸರನ್ನು ತೆಗೆಯುವಂತೆ ಮೇಲುಕೋಟೆ ಸ್ಥಾನಿಕರು, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸಂಧ್ಯಾರತಿ ಹೆಸರನ್ನು ಉಳಿಸಿಕೊಂಡು ಸಲಾಂ ಕೈ ಬಿಡಬೇಕು. ತ್ರಿಕಾಲದಲ್ಲಿ ದೇವರಿಗೆ ಆರತಿ ಮಾಡುವ ಪದ್ಧತಿ ಎಲ್ಲಾ ದೇವಾಲಯದಲ್ಲಿ ಇದೆ.
ಸಂಜೆ ವೇಳೆ ಮೇಲುಕೋಟೆ ದೇವಾಲಯದಲ್ಲಿ ಸಂಧ್ಯಾರತಿಯನ್ನು ಸಾವಿರಾರು ವರ್ಷಗಳಿಂದ ಮಾಡಿಕೊಂಡು ಬರಲಾಗಿದೆ ಎಂದು ಸ್ಥಾನಿಕ ಶ್ರೀನಿವಾಸ್ ಹೇಳಿದ್ದಾರೆ.
ಸಂಧ್ಯಾರತಿಗೆ ಯಾರ ಆಕ್ಷೇಪಣೆ ಇಲ್ಲ. ಆದರೆ ಇಲ್ಲಿ ಹೇಳಲಾಗುವ ಸಲಾಂ ಪದಕ್ಕೆ ಎಲ್ಲರ ಆಕ್ಷೇಪಣೆ ಉಇದೆ. ಸಲಾಂ ಪದ ರದ್ದು ಮಾಡಲು ಹಲವು ವರ್ಷಗಳಿಂದ ಕೂಗಿದೆ. ಈ ವಿಚಾರವಾಗಿ ಸರ್ಕಾರ ಪರಿಶೀಲನೆ ಮಾಡಿ ಸಲಾಂ ಪದ ತೆಗೆಯಬೇಕು ಎಂದು ಮನವಿ ಮಾಡಿದರು.
ಮುಸ್ಲಿಂ ದಾಳಿಕೋರರಿಂದ ದಾಳಿಯಾದ ಸಂದರ್ಭದಲ್ಲಿ ಅಥವಾ ಟಿಪ್ಪುವಿನ ಕಾಲದಲ್ಲಿ ಸಂಧ್ಯಾರತಿಗೆ ಸಲಾಂ ಪದ ಸೇರಿದೆ. ಮೂಲ ಮೂರ್ತಿಗೆ ಆರತಿಯಾಗುವ ಸಂದರ್ಭದಲ್ಲಿ ದೇವಾಲಯದ ಹೊರಗಡೆ ದೀವಟಿಗೆ ಸಲಾಂ ಮಾಡಲಾಗುತ್ತೆ. ಬಳಿಕ ದೇವಾಲಯ ಗರ್ಭಗುಡಿಯ ಬಳಿಯು ದೀವಟಿಗೆ ಸಲಾಂ ಮಾಡಲಾಗುತ್ತೆ. ಚಲುವನಾರಾಯಣ ಸ್ವಾಮಿ ಎಲ್ಲಾ ಉತ್ಸವ ಮುಗಿಸಿ ಆಸ್ಥಾನಕ್ಕೆ ಬರುವ ವೇಳೆ ಈ ದೀವಟಿಗೆ ಸಲಾಂ ಮಾಡಲಾಗುತ್ತೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು